ಜಿದ್ದಾ: ತಾಯ್ನಾಡಿಗೆ ಮರಳಲು ಜಿದ್ದಾ ವಿಮಾನ ನಿಲ್ದಾಣ ತಲುಪಿದ ಬೆಳ್ತಂಗಡಿಯ ಹಿದಾಯತ್ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಫೆ.13ರ ತಡ ರಾತ್ರಿ ನಡೆದಿದೆ.
ಹಿದಾಯತ್ ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಅಲ್ಲಿನ ವಿಮಾನ ನಿಲ್ದಾಣದ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.
ಜಿದ್ದಾದಿಂದ ರಾತ್ರಿ 10.30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ವಿಮಾನ ನಿಲ್ದಾಣ ತಲುಪುವವರಿದ್ದರು. ಶುಕ್ರವಾರ ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಹೇಳಿದ್ದರು. ಆದರೆ, ಮರಳಿಬಾರದ ಲೋಕಕ್ಕೆ ಯಾತ್ರೆಯಾದರು.
ಅತ್ಯುತ್ತಮ ಹಿನ್ನಲೆ ಗಾಯಕರೂ ಆಗಿದ್ದ ಅವರು ಆರಂಭದಲ್ಲಿ ಉದ್ಯೋಗ ನಿಮಿತ್ತ ಬಹರೈನ್ ಗೆ ತೆರಳಿದ್ದವರು ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿದ್ದು ಕಾರ್ಗೊ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಮೃತರು ತಂದೆ ಅಬ್ದುಲ್ ರಖಾಕ್, ತಾಯಿ ಶಂಶಿರ ಬಾನು, ಪತ್ನಿ ರೇಷ್ಮಾ ಹಾಗೂ ಒಬ್ಬ ಮಗ, ಮೂವರು ಹೆಣ್ಣು ಮಕ್ಕಳು ಹಾಗೂ ಕುಟುಂಬದವರುನ್ನು ಅಗಲಿದ್ದಾರೆ.
ಹಿದಾಯತ್ ಅವರ ಪಾರ್ಥಿವ ಶರೀರವನ್ನು ಊರಿಗೆ ತರುವ ಬಗ್ಗೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಹಿದಾಯತ್ ಅವರ ಬಾಲ್ಯ ಸ್ನೇಹಿತ, ಅಕ್ಬರ್ ಬೆಳ್ತಂಗಡಿ ಮಾಹಿತಿ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ