ಹೊಸದಿಲ್ಲಿ: ಉತ್ತರಪ್ರದೇಶದ ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನ ನದಿಯ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ. ನೀರಿನಲ್ಲಿ ಮಾನವ ಹಾಗೂ ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡು ಬರುವ ಕೋಲಿಫಾರ್ಮ್ ಬ್ಯಾಕ್ಟಿರಿಯಾಗಳ ಮಟ್ಟ ಅಧಿಕವಾಗಿರುವುದರಿಂದ ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು (ಸಿಪಿಸಿಬಿ) ಹೇಳಿದೆ.
ಪುಣ್ಯ ಸ್ನಾನದ ದಿನಗಳು ಸೇರಿದಂತೆ ಮಹಾಕುಂಭಮೇಳದ ಸಂದರ್ಭ ದೊಡ್ಡ ಸಂಖ್ಯೆಯ ಜನರು ನದಿಯಲ್ಲಿ ಸ್ನಾನ ಮಾಡಿರುವುದು ನೀರಿನಲ್ಲಿ ಕೋಲಿಫಾರ್ಮ್ ಬ್ಯಾಕ್ಟಿರಿಯಾಗಳ ಸಂಖ್ಯೆಯಲ್ಲಿ ಏರಿಕೆಯಾಗಲು ಕಾರಣವಾಗಿದೆ ಎಂದು ವರದಿ ಹೇಳಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಜನವರಿ 12, 13ರಂದು ಗಂಗಾ ನದಿಯ ನೀರಿನ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ನಡೆಸಿತ್ತು. ಅದು ನೀರಿನ ಸ್ಯಾಂಪಲ್ ನ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ಸೋಮವಾರ ಸಲ್ಲಿಸಿದೆ.
ಪ್ರಯಾಗ್ ರಾಜ್ ನಲ್ಲಿ ಗಂಗಾ ಹಾಗೂ ಯಮುನಾ ನದಿಗಳಿಗೆ ಒಳ ಚರಂಡಿ ನೀರು ಬಿಡುವುದನ್ನು ತಡೆಯುವ ಕ್ರಮಗಳನ್ನು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಅಧ್ಯಕ್ಷರಾಗಿರುವ ಪ್ರಕಾಶ್ ಶ್ರೀವಾತ್ಸವ ನೇತೃತ್ವದ ಹಸಿರು ನ್ಯಾಯ ಮಂಡಳಿ ಸಮಿತಿ ಪರಿಶೀಲನೆ ನಡೆಸಿತು. ನೀರಿನ ಗುಣಮಟ್ಟವನ್ನು ಅನುಸರಣೆ ಮಾಡದೇ ಇರುವುದನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಫೆಬ್ರವರಿ 3ರ ವರದಿ ಬೆಳಕು ಚೆಲ್ಲಿರುವುದನ್ನು ಸಮಿತಿ ಗಮನಿಸಿದೆ. ಪರಿಶೀಲಿಸಲಾದ ಎಲ್ಲಾ ಸ್ಥಳಗಳು ಕೋಲಿಫಾರ್ಮ್ ಬ್ಯಾಕ್ಟಿರಿಯಾಗಳಿಂದ ಕಲುಷಿತವಾಗಿರುವುದರಿಂದ ನದಿ ನೀರು ಸ್ನಾನ ಯೋಗ್ಯವಾಗಿಲ್ಲ ಎಂದು ಕೂಡ ವರದಿ ಉಲ್ಲೇಖಿಸಿದೆ.
ಈ ಹಿಂದೆ ನಿರ್ದೇಶಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತ ವಿಸ್ತ್ರತ ವರದಿ ಸಲ್ಲಿಸಲು ಉತ್ತರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ವಿಫಲವಾಗಿರುವ ಕುರಿತು ಸಮಿತಿ ಗಮನಿಸಿದೆ. ಇದರ ಬದಲು ಅದು ನೀರಿನ ಪರೀಕ್ಷೆಯ ಫಲಿತಾಂಶದೊಂದಿಗೆ ಪತ್ರವನ್ನು ಸಲ್ಲಿಸಿದೆ ಎಂದು ಅದು ಹೇಳಿದೆ.
ವರದಿ ಪರಿಶೀಲಿಸಲು ಹಾಗೂ ಪ್ರತ್ರಿಕ್ರಿಯಿಸಲು ಉತ್ತರಪ್ರದೇಶದ ವಕೀಲರಿಗೆ ನ್ಯಾಯಾಧಿಕರಣ ಒಂದು ದಿನದ ಕಾಲಾವಕಾಶ ನೀಡಿತ್ತು. ಇದಲ್ಲದೆ, ಉತ್ತರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಯಾಗ್ ರಾಜ್ ನಲ್ಲಿ ನೀರಿನ ಗುಣಮಟ್ಟಕ್ಕೆ ಕಾರಣವಾದ ರಾಜ್ಯಾಡಳಿತಕ್ಕೆ ಫೆಬ್ರವರಿ 19ರಂದು ವರ್ಚುವಲ್ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿದೆ.
ಗಂಗಾ, ಯಮುನಾ ನದಿ ನೀರಿನ ಗುಣಮಟ್ಟದ ಬಗ್ಗೆ ಪ್ರತಿಕ್ರಿಯಿಸಿರುವ ಜ್ಯೋತಿಶ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕೇಶ್ವರಾನಂದ ಸರಸ್ವತಿ, ಕುಂಭಮೇಳ ಆರಂಭವಾಗುವುದಕ್ಕಿಂತ ಮುನ್ನವೇ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಗಂಗಾ ಹಾಗೂ ಯಮುನಾ ನದಿಯ ನೀರಿನ ಗುಣಮಟ್ಟದ ಬಗ್ಗೆ ಗಮನ ಸೆಳೆದಿತ್ತು. ಅದು ನಿರ್ದಿಷ್ಟ ನಿರ್ದೇಶನಗಳನ್ನು ನೀಡಿತ್ತು. ಮುಖ್ಯವಾಗಿ ಚರಂಡಿ ನೀರು ನದಿಗೆ ಹರಿಯುವುದನ್ನು ತಡೆಗಟ್ಟುವಂತೆ ಸೂಚನೆ ನೀಡಿತ್ತು. ಅಲ್ಲಿ 40ರಿಂದ 50 ಕೋಟಿ ಜನರು ಸ್ನಾನ ಮಾಡಿದ್ದಾರೆ. ಅಲ್ಲದೆ, ಇದು ಜಗತ್ತಿನಾದ್ಯಂತ ಪ್ರಚಾರವಾಗುತ್ತಿದೆ. ಆದರೆ, ಸ್ನಾನ ಮಾಡುವುದಕ್ಕೆ ಮೂಲಭೂತ ಸೌಲಭ್ಯವಾದ ಸ್ವಚ್ಛ ನೀರು ಪೂರೈಸಿಲ್ಲ ಎಂದಿದ್ದಾರೆ.
ಕುಂಭ ಮೇಳದಿಂದ ಹಿಂದಿರುಗಿದವರಲ್ಲಿ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿವೆ ಎಂದು ದಿಲ್ಲಿಯ ಇಂದ್ರಪ್ರಸ್ಥ ಅಪಲ್ಲೊ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ