ಹೊಸದಿಲ್ಲಿ: ಉತ್ತರಪ್ರದೇಶದ ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನ ನದಿಯ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ. ನೀರಿನಲ್ಲಿ ಮಾನವ ಹಾಗೂ ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡು ಬರುವ ಕೋಲಿಫಾರ್ಮ್ ಬ್ಯಾಕ್ಟಿರಿಯಾಗಳ ಮಟ್ಟ ಅಧಿಕವಾಗಿರುವುದರಿಂದ ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು (ಸಿಪಿಸಿಬಿ) ಹೇಳಿದೆ.
ಪುಣ್ಯ ಸ್ನಾನದ ದಿನಗಳು ಸೇರಿದಂತೆ ಮಹಾಕುಂಭಮೇಳದ ಸಂದರ್ಭ ದೊಡ್ಡ ಸಂಖ್ಯೆಯ ಜನರು ನದಿಯಲ್ಲಿ ಸ್ನಾನ ಮಾಡಿರುವುದು ನೀರಿನಲ್ಲಿ ಕೋಲಿಫಾರ್ಮ್ ಬ್ಯಾಕ್ಟಿರಿಯಾಗಳ ಸಂಖ್ಯೆಯಲ್ಲಿ ಏರಿಕೆಯಾಗಲು ಕಾರಣವಾಗಿದೆ ಎಂದು ವರದಿ ಹೇಳಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಜನವರಿ 12, 13ರಂದು ಗಂಗಾ ನದಿಯ ನೀರಿನ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ನಡೆಸಿತ್ತು. ಅದು ನೀರಿನ ಸ್ಯಾಂಪಲ್ ನ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ಸೋಮವಾರ ಸಲ್ಲಿಸಿದೆ.
ಪ್ರಯಾಗ್ ರಾಜ್ ನಲ್ಲಿ ಗಂಗಾ ಹಾಗೂ ಯಮುನಾ ನದಿಗಳಿಗೆ ಒಳ ಚರಂಡಿ ನೀರು ಬಿಡುವುದನ್ನು ತಡೆಯುವ ಕ್ರಮಗಳನ್ನು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಅಧ್ಯಕ್ಷರಾಗಿರುವ ಪ್ರಕಾಶ್ ಶ್ರೀವಾತ್ಸವ ನೇತೃತ್ವದ ಹಸಿರು ನ್ಯಾಯ ಮಂಡಳಿ ಸಮಿತಿ ಪರಿಶೀಲನೆ ನಡೆಸಿತು. ನೀರಿನ ಗುಣಮಟ್ಟವನ್ನು ಅನುಸರಣೆ ಮಾಡದೇ ಇರುವುದನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಫೆಬ್ರವರಿ 3ರ ವರದಿ ಬೆಳಕು ಚೆಲ್ಲಿರುವುದನ್ನು ಸಮಿತಿ ಗಮನಿಸಿದೆ. ಪರಿಶೀಲಿಸಲಾದ ಎಲ್ಲಾ ಸ್ಥಳಗಳು ಕೋಲಿಫಾರ್ಮ್ ಬ್ಯಾಕ್ಟಿರಿಯಾಗಳಿಂದ ಕಲುಷಿತವಾಗಿರುವುದರಿಂದ ನದಿ ನೀರು ಸ್ನಾನ ಯೋಗ್ಯವಾಗಿಲ್ಲ ಎಂದು ಕೂಡ ವರದಿ ಉಲ್ಲೇಖಿಸಿದೆ.
ಈ ಹಿಂದೆ ನಿರ್ದೇಶಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತ ವಿಸ್ತ್ರತ ವರದಿ ಸಲ್ಲಿಸಲು ಉತ್ತರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ವಿಫಲವಾಗಿರುವ ಕುರಿತು ಸಮಿತಿ ಗಮನಿಸಿದೆ. ಇದರ ಬದಲು ಅದು ನೀರಿನ ಪರೀಕ್ಷೆಯ ಫಲಿತಾಂಶದೊಂದಿಗೆ ಪತ್ರವನ್ನು ಸಲ್ಲಿಸಿದೆ ಎಂದು ಅದು ಹೇಳಿದೆ.
ವರದಿ ಪರಿಶೀಲಿಸಲು ಹಾಗೂ ಪ್ರತ್ರಿಕ್ರಿಯಿಸಲು ಉತ್ತರಪ್ರದೇಶದ ವಕೀಲರಿಗೆ ನ್ಯಾಯಾಧಿಕರಣ ಒಂದು ದಿನದ ಕಾಲಾವಕಾಶ ನೀಡಿತ್ತು. ಇದಲ್ಲದೆ, ಉತ್ತರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಯಾಗ್ ರಾಜ್ ನಲ್ಲಿ ನೀರಿನ ಗುಣಮಟ್ಟಕ್ಕೆ ಕಾರಣವಾದ ರಾಜ್ಯಾಡಳಿತಕ್ಕೆ ಫೆಬ್ರವರಿ 19ರಂದು ವರ್ಚುವಲ್ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿದೆ.
ಗಂಗಾ, ಯಮುನಾ ನದಿ ನೀರಿನ ಗುಣಮಟ್ಟದ ಬಗ್ಗೆ ಪ್ರತಿಕ್ರಿಯಿಸಿರುವ ಜ್ಯೋತಿಶ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕೇಶ್ವರಾನಂದ ಸರಸ್ವತಿ, ಕುಂಭಮೇಳ ಆರಂಭವಾಗುವುದಕ್ಕಿಂತ ಮುನ್ನವೇ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಗಂಗಾ ಹಾಗೂ ಯಮುನಾ ನದಿಯ ನೀರಿನ ಗುಣಮಟ್ಟದ ಬಗ್ಗೆ ಗಮನ ಸೆಳೆದಿತ್ತು. ಅದು ನಿರ್ದಿಷ್ಟ ನಿರ್ದೇಶನಗಳನ್ನು ನೀಡಿತ್ತು. ಮುಖ್ಯವಾಗಿ ಚರಂಡಿ ನೀರು ನದಿಗೆ ಹರಿಯುವುದನ್ನು ತಡೆಗಟ್ಟುವಂತೆ ಸೂಚನೆ ನೀಡಿತ್ತು. ಅಲ್ಲಿ 40ರಿಂದ 50 ಕೋಟಿ ಜನರು ಸ್ನಾನ ಮಾಡಿದ್ದಾರೆ. ಅಲ್ಲದೆ, ಇದು ಜಗತ್ತಿನಾದ್ಯಂತ ಪ್ರಚಾರವಾಗುತ್ತಿದೆ. ಆದರೆ, ಸ್ನಾನ ಮಾಡುವುದಕ್ಕೆ ಮೂಲಭೂತ ಸೌಲಭ್ಯವಾದ ಸ್ವಚ್ಛ ನೀರು ಪೂರೈಸಿಲ್ಲ ಎಂದಿದ್ದಾರೆ.
ಕುಂಭ ಮೇಳದಿಂದ ಹಿಂದಿರುಗಿದವರಲ್ಲಿ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿವೆ ಎಂದು ದಿಲ್ಲಿಯ ಇಂದ್ರಪ್ರಸ್ಥ ಅಪಲ್ಲೊ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ತಬೂಕ್ ಘಟಕದ ವಾರ್ಷಿಕ ಮಹಾಸಭೆ
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಗಲ್ಫ್ ರಾಷ್ಟ್ರಗಳಿಂದ 8.43 ಲಕ್ಷ ಭಾರತೀಯರು ವಾಪಸ್
ಶಾಫಿ ಸಅದಿ ವಿರುದ್ಧ ಸುಳ್ಳು ಸುದ್ದಿ ಪ್ರಕಟ: ‘ಮಿನಾರಂ’ ಡಿಜಿಟಲ್ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ
ಎಪ್ರಿಲ್ 12: ಮಾದರಿ ಮದುವೆ ಅಭಿಯಾನ ಸಮಾರೋಪದ ಪ್ರಚಾರಾರ್ಥ ಸಾಂಘಿಕ ನಾಯಕರ ಸಭೆ
ಕಾಟಿಪಳ್ಳ: ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ- ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ
ಶರಫುಲ್ ಉಲಮಾ 7ನೇ ವಾರ್ಷಿಕ ಅನುಸ್ಮರಣೆ- ಮೇ 13, 14 ರಂದು ವಿವಿಧ ಕಾರ್ಯಕ್ರಮ
ಬಶೀರ್ ಕಿನ್ಯ ಅವರಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ: ಸಾಹಿತ್ಯ ಲೋಕದ ಬಹುಭಾಷಾ ಪಂಡಿತನಿಗೆ ಒಲಿದ ಮನ್ನಣೆ
ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣ- ಐತಿಹಾಸಿಕ ‘ಮಕ್ಕಳ ಸ್ನೇಹಿ ಸಾರಿಗೆ’ ಯೋಜನೆ ಸಿದ್ಧ
ಕಿನ್ಯಾ ‘ಗೋಲ್ಡನ್ ಹೆಲ್ತ್’ ಶಿಲಾನ್ಯಾಸ: ರೋಗ ಬರದಂತೆ ತಡೆಯುವ ಜನಜಾಗೃತಿ ಇಂದಿನ ಅಗತ್ಯ- ಸ್ಪೀಕರ್ ಯು.ಟಿ. ಖಾದರ್
ಡಿಕೆಎಸ್ಸಿ ಅಲ್-ಖೋಬರ್ ಘಟಕ: ಮಾಸಿಕ ಸಭೆ ಹಾಗೂ ಗಣ್ಯರಿಗೆ ಸನ್ಮಾನ