ಉಳ್ಳಾಲ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಯು.ಟಿ.ಎಂ. ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಪ್ರಯುಕ್ತ ಆಹಾರ ಕಿಟ್ ವಿತರಣಾ ಕಾರ್ಯಕ್ರಮವು ಫೆಬ್ರವರಿ 25 ರಂದು ಮಂಜನಾಡಿ ಅಲ್ ಮದೀನದ ಶರಪುಲ್ ಉಲಮಾ ಆಡಿಟೋರಿಯಂ ನಲ್ಲಿ ನಡೆಯಿತು.
ಅಲ್ ಮದೀನ ದಅವಾ ಕಾಲೇಜ್ ಪ್ರಾಂಶುಪಾಲರಾದ ಸಯ್ಯಿದ್ ಉವೈಸ್ ತಂಗಳ್ ದುಆ ನೆರವೇರಿಸಿದರು. ಅಲ್ ಮದೀನಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ಯುಟಿಎಂ ಅಧ್ಯಕ್ಷ ಹಾಜಿ ಫಾರೂಕ್ ಅಬ್ಬಾಸ್ ಅಧ್ಯಕ್ಷತೆ ವಹಿಸಿದರು.
ಈ ಸಂದರ್ಭದಲ್ಲಿ ಮಾತಾನಾಡಿದ ಅವರು; ಯುಟಿಎಂ ಟ್ರಸ್ಟ್ ವತಿಯಿಂದ ರೋಗಿಗಳಿಗೆ ಚಿಕಿತ್ಸಾ ನೆರವು, ಬಡ ಕುಟುಂಬಗಳಿಗೆ ಮಾಸಿಕ ಆಹಾರ ಕಿಟ್ ವಿತರಣೆ ಹಾಗೂ ಅಪಘಾತ, ರೋಗ ಇತ್ಯಾದಿಗಳಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಅಸಹಾಯಕರಿಗೆ ವ್ಯಾಪಾರ ಮಾಡಿ ಜೀವಿಸಲು ಆರ್ಥಿಕ ಸಹಾಯ ಮಾಡುತ್ತ ಬರುತ್ತಿದೆ ಎಂದರು. ಟ್ರಸ್ಟ್ ಕಾರ್ಯದರ್ಶಿ ಮೊಯ್ದಿನ್ ಹಾಜಿ ಮಲಾಝ್ ಸ್ವಾಗತಿಸಿದರು. ಖಜಾಂಜಿ ಅಬ್ದಲ್ ಬಶೀರ್ ಉಳ್ಳಾಲ , ಇಬ್ರಾಹೀಮ್ ಹಮ್ಮಬ್ಬ ಉಳ್ಳಾಲ ಉಪಸ್ಥಿತರಿದ್ದರು. ಅಬ್ದುಲ್ ರಜಾಕ್ ಮಾಸ್ಟರ್ ನಾವೂರು ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ