ದಮ್ಮಾಮ್: ಸೌದಿ ಅರೇಬಿಯಾದಲ್ಲಿ ರಂಜಾನ್ ಪ್ರಯುಕ್ತ ದೇಶದ ಕೈದಿಗಳಿಗೆ ಕ್ಷಮಾದಾನ ಘೋಷಿಸಲಾಗಿದೆ. ಈ ನಿರ್ಧಾರವು ವಲಸಿಗರು ಸೇರಿದಂತೆ ಅನೇಕರಿಗೆ ಪರಿಹಾರವಾಗಲಿದೆ. ದೊರೆ ಸಲ್ಮಾನ್ ಘೋಷಿಸಿರುವ ಕ್ಷಮಾದಾನಕ್ಕೆ ಅರ್ಹರಾದವರನ್ನು ಗುರುತಿಸುವ ಪ್ರಕ್ರಿಯೆಯನ್ನು ಆಂತರಿಕ ಸಚಿವಾಲಯ ಆರಂಭಿಸಿದೆ. ಗಂಭೀರವಲ್ಲದ ಸಾರ್ವಜನಿಕ ಕಾನೂನು ಉಲ್ಲಂಘನೆಗಳಿಗಾಗಿ ಕಾನೂನು ಕ್ರಮವನ್ನು ಎದುರಿಸುತ್ತಿರುವವರಿಗೆ ಪ್ರಯೋಜನವಾಗಲಿದೆ.
ಕ್ಷಮಾದಾನಕ್ಕೆ ಅರ್ಹರಾಗಿರುವವರ ಪಟ್ಟಿಯನ್ನು ಸಿದ್ಧಪಡಿಸುವಂತೆ ಆಂತರಿಕ ಸಚಿವ ರಾಜಕುಮಾರ ಅಬ್ದುಲ್ ಅಝೀಝ್ ಬಿನ್ ಸಊದ್ ಬಿನ್ ನಾಯಿಫ್ ಕಾರಾಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಕ್ರಮವು ದೊರೆ ಸಲ್ಮಾನ್ ಅವರ ಘೋಷಣೆಯ ತ್ವರಿತ ಅನುಷ್ಠಾನದ ಭಾಗವಾಗಿದೆ. ಕ್ಷಮಾದಾನಕ್ಕೆ ಅರ್ಹರಾದವರನ್ನು ಗುರುತಿಸಲು ಪ್ರತಿ ಪ್ರಾಂತ್ಯದಲ್ಲೂ ವಿಶೇಷ ಸಮಿತಿಗಳನ್ನು ರಚಿಸಲಾಗಿದೆ. ಇದರಲ್ಲಿ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಸೇರಿಸಲಾಗಿದೆ.
ಕೊಲೆ, ದೇಶದ್ರೋಹ, ಭಯೋತ್ಪಾದನೆ ಮುಂತಾದ ಗಂಭೀರ ಪ್ರಕರಣವನ್ನು ಹೊರತುಪಡಿಸಿ, ಸಾಮಾನ್ಯ ಕಾನೂನು ಉಲ್ಲಂಘನೆಗಳಿಗಾಗಿ ಶಿಕ್ಷೆಯನ್ನು ಅನುಭವಿಸುತ್ತಿರುವ ಕೈದಿಗಳನ್ನು ಕ್ಷಮಾದಾನಕ್ಕೆ ಪರಿಗಣಿಸಲಾಗುತ್ತದೆ. ಸಂಚಾರ ಉಲ್ಲಂಘನೆ, ಸೈಬರ್ ಅಪರಾಧಗಳು, ಆರ್ಥಿಕ ಅಕ್ರಮಗಳು, ನೈತಿಕತೆ, ಕಳ್ಳತನ ಪ್ರಕರಣಗಳು ಮತ್ತು ವಸತಿ ಉಲ್ಲಂಘನೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಪುರುಷರು ಮತ್ತು ಮಹಿಳೆಯರಿಗೆ ಇದರ ಪ್ರಯೋಜನ ಲಭಿಸಲಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು