ದಮ್ಮಾಮ್: ಸೌದಿ ಅರೇಬಿಯಾದಲ್ಲಿ ರಂಜಾನ್ ಪ್ರಯುಕ್ತ ದೇಶದ ಕೈದಿಗಳಿಗೆ ಕ್ಷಮಾದಾನ ಘೋಷಿಸಲಾಗಿದೆ. ಈ ನಿರ್ಧಾರವು ವಲಸಿಗರು ಸೇರಿದಂತೆ ಅನೇಕರಿಗೆ ಪರಿಹಾರವಾಗಲಿದೆ. ದೊರೆ ಸಲ್ಮಾನ್ ಘೋಷಿಸಿರುವ ಕ್ಷಮಾದಾನಕ್ಕೆ ಅರ್ಹರಾದವರನ್ನು ಗುರುತಿಸುವ ಪ್ರಕ್ರಿಯೆಯನ್ನು ಆಂತರಿಕ ಸಚಿವಾಲಯ ಆರಂಭಿಸಿದೆ. ಗಂಭೀರವಲ್ಲದ ಸಾರ್ವಜನಿಕ ಕಾನೂನು ಉಲ್ಲಂಘನೆಗಳಿಗಾಗಿ ಕಾನೂನು ಕ್ರಮವನ್ನು ಎದುರಿಸುತ್ತಿರುವವರಿಗೆ ಪ್ರಯೋಜನವಾಗಲಿದೆ.
ಕ್ಷಮಾದಾನಕ್ಕೆ ಅರ್ಹರಾಗಿರುವವರ ಪಟ್ಟಿಯನ್ನು ಸಿದ್ಧಪಡಿಸುವಂತೆ ಆಂತರಿಕ ಸಚಿವ ರಾಜಕುಮಾರ ಅಬ್ದುಲ್ ಅಝೀಝ್ ಬಿನ್ ಸಊದ್ ಬಿನ್ ನಾಯಿಫ್ ಕಾರಾಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಕ್ರಮವು ದೊರೆ ಸಲ್ಮಾನ್ ಅವರ ಘೋಷಣೆಯ ತ್ವರಿತ ಅನುಷ್ಠಾನದ ಭಾಗವಾಗಿದೆ. ಕ್ಷಮಾದಾನಕ್ಕೆ ಅರ್ಹರಾದವರನ್ನು ಗುರುತಿಸಲು ಪ್ರತಿ ಪ್ರಾಂತ್ಯದಲ್ಲೂ ವಿಶೇಷ ಸಮಿತಿಗಳನ್ನು ರಚಿಸಲಾಗಿದೆ. ಇದರಲ್ಲಿ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಸೇರಿಸಲಾಗಿದೆ.
ಕೊಲೆ, ದೇಶದ್ರೋಹ, ಭಯೋತ್ಪಾದನೆ ಮುಂತಾದ ಗಂಭೀರ ಪ್ರಕರಣವನ್ನು ಹೊರತುಪಡಿಸಿ, ಸಾಮಾನ್ಯ ಕಾನೂನು ಉಲ್ಲಂಘನೆಗಳಿಗಾಗಿ ಶಿಕ್ಷೆಯನ್ನು ಅನುಭವಿಸುತ್ತಿರುವ ಕೈದಿಗಳನ್ನು ಕ್ಷಮಾದಾನಕ್ಕೆ ಪರಿಗಣಿಸಲಾಗುತ್ತದೆ. ಸಂಚಾರ ಉಲ್ಲಂಘನೆ, ಸೈಬರ್ ಅಪರಾಧಗಳು, ಆರ್ಥಿಕ ಅಕ್ರಮಗಳು, ನೈತಿಕತೆ, ಕಳ್ಳತನ ಪ್ರಕರಣಗಳು ಮತ್ತು ವಸತಿ ಉಲ್ಲಂಘನೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಪುರುಷರು ಮತ್ತು ಮಹಿಳೆಯರಿಗೆ ಇದರ ಪ್ರಯೋಜನ ಲಭಿಸಲಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ