ಕಾಸರಗೋಡು: ಮಂಜೇಶ್ವರ ವಾಮಂಜೂರಿನಲ್ಲಿ ಕಾರು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 9:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದರೆಂದು ವರದಿಯಾಗಿದೆ. ಕಾಸರಗೋಡು ಪೈವಳಿಕೆ ಬಾಯಿಕಟ್ಟ ಮೂಲದ ಜನಾರ್ದನ, ಅವರ ಪುತ್ರ ವರುಣ್ ಮತ್ತು ಸೋದರ ಸಂಬಂಧಿ ಮಂಗಳೂರಿನ ಕಿಶನ್ ಮೃತಪಟ್ಟಿದ್ದಾರೆ. ಅವರ ಸಂಬಂಧಿ ಉಪ್ಪಿನಂಗಡಿ ಮೂಲದ ರತನ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮಂಗಲ್ಪಾಡಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಕಾಸರಗೋಡಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿದ ಕಾರು ಸೇತುವೆಯ ಗಾರ್ಡ್ ರೈಲ್ ಮತ್ತು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಬಿಡಿಭಾಗಗಳು ರಸ್ತೆಯಲ್ಲಿ ಹರಡಿಕೊಂಡಿದೆ. ಡಿಕ್ಕಿಯ ರಭಸಕ್ಕೆ ಸಾವನ್ನಪ್ಪಿರುವ ಮೂವರು ಕಾರಿನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದರು. ಕಿಶನ್ನನ್ನು ಮಂಗಳೂರಿಗೆ ತಲುಪಿಸಲು ಮನೆಯವರು ತೆರಳಿದ್ದರು ಎನ್ನಲಾಗಿದೆ.
ಚಾಲಕ ನಿದ್ರೆಗೆ ಜಾರಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಪ್ರದೇಶದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಡಿವೈಡರ್ ಅಳವಡಿಕೆಯಲ್ಲಿ ಲೋಪ ಎಸಗಲಾಗಿದೆ ಎಂಬ ಆರೋಪವೂ ಕೇಳಿ ಬಂದಿತ್ತು.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ