ಬೆಂಗಳೂರು: ದೂತ ಸಮೀರ್ ಎಂಡಿ ಎಂಬ ಯೂಟ್ಯೂಬರ್ ತಮ್ಮ ಚಾನೆಲ್ನಲ್ಲಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಕುರಿತು ಸವಿವರವಾಗಿ ವಿಡಿಯೋ ಮಾಡಿದ್ದು, ರಾಜ್ಯದಲ್ಲಿ ದೊಡ್ಡ ಸಂಚಲನವನ್ನೇ ಉಂಟು ಮಾಡಿದೆ. ಈ ವೀಡಿಯೋ ಇದೀಗ 14 ಮಿಲಿಯನ್ ವ್ಯೂವ್ಸ್ ಪಡೆದು ವೈರಲ್ ಆಗಿದೆ.
ವೀಕ್ಷಕರೆಲ್ಲರೂ ಸಮೀರ್ ಗೆ ಮೆಚ್ಚುಗೆಯನ್ನು, ಬೆಂಬಲವನ್ನೂ ವ್ಯಕ್ತಪಡಿಸಿದ್ದಾರಲ್ಲದೇ, ಧೈರ್ಯವನ್ನು ತುಂಬಿದ್ದಾರೆ. ವೀಡಿಯೋ ವ್ಯಾಪಕ ಪ್ರಚಾರಗೊಳ್ಳುತ್ತಿದ್ದಂತೆ ಪೊಲೀಸರು ಆಗಮಿಸಿ ಸಮೀರ್ ಬಂಧನಕ್ಕೆ ಮುಂದಾಗಿದ್ದು, ನಂತರ ವಿಚಾರಣೆಗೆ ಸಹಕರಿಸುವುದಾಗಿ ಭರವಸೆ ನೀಡಿದ ಮೇಲೆ ಪೋಲೀಸರು ನೋಟಿಸ್ ನೀಡಿ ಹಿಂದಿರುಗಿದ್ದಾರೆ ಎಂದು ಫೇಸ್ ಬುಕ್ ಲೈವ್ನಲ್ಲಿ ಸಮೀರ್ ಹೇಳಿದ್ದರು. ಅನಂತರ ಗಿರೀಶ್ ಮಟ್ಟಣ್ಣನವರ್ ಅವರ ವಕೀಲರ ತಂಡ ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದರು.
ಕಾನೂನು ಉಲ್ಲಂಘಿಸಿ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಪೊಲೀಸರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹಾಗಾಗಿ ಈ ಮೂಲಕ ಸಮೀರ್ ಗೆ ಬಿಗ್ ರಿಲೀಫ್ ದೊರಕಿದಂತಾಗಿದೆ. ಅರೆಸ್ಟ್ ಮಾಡುವ ಹಾಗಿಲ್ಲ, ಪೊಲೀಸ್ ಠಾಣೆಗೂ ಕರೆಯುವ ಹಾಗಿಲ್ಲ ಎಂದು ಕೋರ್ಟ್ ಹೇಳಿದೆ ಎಂದು ಗಿರೀಶ್ ಮಟ್ಟಣನವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ