ಬೆಂಗಳೂರು: ದೂತ ಸಮೀರ್ ಎಂಡಿ ಎಂಬ ಯೂಟ್ಯೂಬರ್ ತಮ್ಮ ಚಾನೆಲ್ನಲ್ಲಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಕುರಿತು ಸವಿವರವಾಗಿ ವಿಡಿಯೋ ಮಾಡಿದ್ದು, ರಾಜ್ಯದಲ್ಲಿ ದೊಡ್ಡ ಸಂಚಲನವನ್ನೇ ಉಂಟು ಮಾಡಿದೆ. ಈ ವೀಡಿಯೋ ಇದೀಗ 14 ಮಿಲಿಯನ್ ವ್ಯೂವ್ಸ್ ಪಡೆದು ವೈರಲ್ ಆಗಿದೆ.
ವೀಕ್ಷಕರೆಲ್ಲರೂ ಸಮೀರ್ ಗೆ ಮೆಚ್ಚುಗೆಯನ್ನು, ಬೆಂಬಲವನ್ನೂ ವ್ಯಕ್ತಪಡಿಸಿದ್ದಾರಲ್ಲದೇ, ಧೈರ್ಯವನ್ನು ತುಂಬಿದ್ದಾರೆ. ವೀಡಿಯೋ ವ್ಯಾಪಕ ಪ್ರಚಾರಗೊಳ್ಳುತ್ತಿದ್ದಂತೆ ಪೊಲೀಸರು ಆಗಮಿಸಿ ಸಮೀರ್ ಬಂಧನಕ್ಕೆ ಮುಂದಾಗಿದ್ದು, ನಂತರ ವಿಚಾರಣೆಗೆ ಸಹಕರಿಸುವುದಾಗಿ ಭರವಸೆ ನೀಡಿದ ಮೇಲೆ ಪೋಲೀಸರು ನೋಟಿಸ್ ನೀಡಿ ಹಿಂದಿರುಗಿದ್ದಾರೆ ಎಂದು ಫೇಸ್ ಬುಕ್ ಲೈವ್ನಲ್ಲಿ ಸಮೀರ್ ಹೇಳಿದ್ದರು. ಅನಂತರ ಗಿರೀಶ್ ಮಟ್ಟಣ್ಣನವರ್ ಅವರ ವಕೀಲರ ತಂಡ ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದರು.
ಕಾನೂನು ಉಲ್ಲಂಘಿಸಿ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಪೊಲೀಸರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹಾಗಾಗಿ ಈ ಮೂಲಕ ಸಮೀರ್ ಗೆ ಬಿಗ್ ರಿಲೀಫ್ ದೊರಕಿದಂತಾಗಿದೆ. ಅರೆಸ್ಟ್ ಮಾಡುವ ಹಾಗಿಲ್ಲ, ಪೊಲೀಸ್ ಠಾಣೆಗೂ ಕರೆಯುವ ಹಾಗಿಲ್ಲ ಎಂದು ಕೋರ್ಟ್ ಹೇಳಿದೆ ಎಂದು ಗಿರೀಶ್ ಮಟ್ಟಣನವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ