ವಿಟ್ಲ :ಸಾಮಾಜಿಕ ಸೇವಾ ರಂಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು “ಬಡವರ ಬಾಳಿಗೆ ನನ್ನದೊಂದು ಪಾಲು” ಎಂಬ ದ್ಯೇಯವನ್ನು ಮುಂದಿಟ್ಟು ಕಾರ್ಯಾಚರಿಸುತ್ತಿರುವ ಬೆಳ್ಳಿ ಹಬ್ಬದ ಹೊಸ್ತಿಲಲ್ಲಿರುವ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದುಲ್ ಫುಖಾರ್ ಸೇವಾ ಟ್ರಸ್ಟ್ ಚೆಡವು ಕನ್ಯಾನ ಹಾಗೂ ದುಲ್ ಫುಖಾರ್ ಗಲ್ಫ್ ಕಮಿಟಿ
ಜಂಟಿ ಆಶ್ರಯದಲ್ಲಿ 2025 ನೇ ಸಾಲಿನ ರಮಲಾನ್ ಕಿಟ್ ವಿತರಣೆಗೆ 10/03/2025 ಸೋಮವಾರ ರಮಳಾನ್ 9 ರಂದು
ಕನ್ಯಾನ ಶಾಹುಲ್ ಹಮೀದ್ ವಲಿಯುಲ್ಲಾಹಿ ಮಖಾಂ ಪರಿಸರದಲ್ಲಿ ಚಾಲನೆ ನೀಡಲಾಯಿತು.
ಪವಿತ್ರ ರಂಜಾನ್ ತಿಂಗಳಲ್ಲಿ ಪ್ರತೀ ವರ್ಷವೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡ ಮತ್ತು ಅನಾಥರಾದ ಕುಟುಂಬಗಳಿಗೆ ನೀಡುತ್ತಿರುವಂತಹ ನಿತ್ಯೋಪಯೋಗಿ ವಸ್ತುಗಳ ಕಿಟ್ ವಿತರಣೆಯು ಗ್ರಾಮೀಣ ಪ್ರದೇಶವಾದ ಕನ್ಯಾನ ಕರೋಪಾಡಿ ಭಾಗದಲ್ಲಿ ಬಡಜನರಿಗೆ ಬಹುದೊಡ್ಡ ಸಹಕಾರಿ.
ಕನ್ಯಾನ ಕೇಂದ್ರ ಜುಮಾ ಮಸೀದಿಯ ಮುಖ್ಯ ಧರ್ಮ ಗುರು ಇಬ್ರಾಹಿಂ ಫೈಝಿ ಉಸ್ತಾದ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಸುಮಾರು 60 ಕುಟುಂಬಗಳಿಗೆ ಕಿಟ್ ವಿತರಿಸಲಾಯಿತು.
ಕನ್ಯಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕೆ ಪಿ ಅಬ್ದುಲ್ ರಹಿಮಾನ್ ಸಹಿತ ಕಮಿಟಿ ಪದಾದಿಕಾರಿಗಳು ಉಪಸ್ಥಿತರಿದ್ದರು.
ವೈದ್ಯಕೀಯ ಸಹಾಯಧನ, ಬಡ ಮತ್ತು ಅನಾಥರಾದ ಹೆಣ್ಣು ಮಕ್ಕಳ ಮದುವೆಗೆ ಸಹಾಯ ,ಮನೆ ನಿರ್ಮಾಣ, ಆರೋಗ್ಯ ಸೇವೆ ಮುಂತಾದ ರಂಗದಲ್ಲಿ ಸದಾ ಮಂಚೂಣಿಯಲ್ಲಿರುವ ದುಲ್ ಪ್ರಖಾರ್ ಸೇವಾ ಟ್ರಸ್ಟ್ ಕನ್ಯಾನ ಮತ್ತು ಪರಿಸರ ಪ್ರದೇಶದಲ್ಲಿ ಸದಾ ಸಮಯ ಬಡ ಮತ್ತು ಅನಾಥರಿಗಾಗಿ ಸೇವೆಗೈಯುತ್ತಾ ಮುಂದುವರಿಯುತ್ತಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ