ಪುತ್ತೂರು: ಬುಳೇರಿಕಟ್ಟೆಯಿಂದ ಸಾಜ ಮಾರ್ಗವಾಗಿ ತೋರಣಕಟ್ಟೆ ಮೂಲಕ ಕಾಸರಗೋಡು ತಲುಪುವ ಈ ಮಾರ್ಗವು ಸಾಜ ಕ್ರಾಸ್ ರಸ್ತೆ ಆರಂಭದಲ್ಲಿ 1ಕಿ.ಮೀ ಮತ್ತು ಹಸಂತಡ್ಕ ಸೇತುವೆಯ ಮುಂದೆ ಸಂಪೂರ್ಣ ಹದಗಟ್ಟಿದ್ದು ಸುಮಾರು 20 ವರ್ಷಗಳಿಂದ ದುರಸ್ಥಿ ಕಾಣದೆ ಪ್ರಯಾಣಿಕರು ಪರದಾಡುವಂತಾಗಿದೆ.
ಕಳೆದ ವರ್ಷ ಈ ರಸ್ತೆಯ ಮಧ್ಯ ಭಾಗದಲ್ಲಿ ಹಿಂದಿನ ಶಾಸಕಿಯಾಗಿದ್ದ ಶಕುಂತಲಾ ಶೆಟ್ಟಿಯವರು ಸುಮಾರು 2ಕೋಟಿ ವೆಚ್ಚದಲ್ಲಿ ಡಾಮರೀಕರಣ ಮಾಡಿಸಿದ್ದು ಇದಕ್ಕಾಗಿ ನಾವು ಅವರನ್ನು ಅಭಿನಂದಿಸುತ್ತೇವೆ. ಆದರೆ ಇನ್ನುಳಿದ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಸಂಸದರು, ಜಿ.ಪಂ., ತಾ.ಪಂ, ಹಾಗೂ ಗ್ರಾ.ಪಂ. ನಾಯಕರು ಇದರ ಬಗ್ಗೆ ಗಮನ ಹರಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ 9 ವರ್ಷಗಳಿಂದ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್’ರವರು ಜನರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸದೆ ಕೇವಲ ಎಲೆಕ್ಷನ್ ಸಮಯದಲ್ಲಿ ಮಾತ್ರ ಈ ಕಡೆ ಬರುತ್ತಿದ್ದು , ಓಟ್ ಕೇಳುವುದು ಮಾತ್ರ ಸಂಸದರ ಕೆಲಸವೇ ಎಂದು ಗ್ರಾಮಸ್ಥರು ಕೇಳುವಂತಾಗಿದೆ.
ಸಾರ್ಯದಿಂದ ಪ್ರಾಥಮಿಕ ವಿಧ್ಯಾಭ್ಯಾಸ ಕಳೆದು ಹೈಸ್ಕೂಲು ವಿಧ್ಯಾಭ್ಯಾಸಕ್ಕಾಗಿ ಬಸ್ಸಿನ ಸೌಕರ್ಯವಿಲ್ಲದೆ 5ಕಿ.ಮೀ ನಡೆಯಬೇಕಾದ ಪರಿಸ್ಥಿತಿ ಇಲ್ಲಿನ ವಿಧ್ಯಾರ್ಥಿಗಳದ್ದು. ರಸ್ತೆಯ ದುರವಸ್ಥೆಯಿಂದಾಗಿ ವಾಹನ ಚಾಲಕರು ಈ ರಸ್ತೆಯ ಮೂಲಕ ಬರಲು ಹಿಂಜರಿಯುತ್ತಿದ್ದಾರೆ. ಇದರಿಂದಾಗಿ ಬಡವರ್ಗದವರು ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಬೇಕಾದ ಪರಿಸ್ಥಿತಿ ಒದಗಿ ಬಂದಿದೆ. ಅತ್ಯಾವಶ್ಯಕವಾಗಿ ಆಸ್ಪತ್ರೆಗೆ ಹೋಗಬೇಕಾದ ರೋಗಿಗಳು ಬಹಳಷ್ಟು ತೊಂದರೆಗಳನ್ನು ಅನುಭವಿಸುವಂತಾಗಿದೆ. .
ಜನಪ್ರತಿನಿಧಿಗಳು, ಅಧಿಕಾರಿಗಳು ಇನ್ನಾದರು ಈ ಪ್ರದೇಶಕ್ಕೆ ಭೇಟಿಕೊಟ್ಟು ತಕ್ಷಣವೇ ಇಲ್ಲಿನ ರಸ್ತೆಯನ್ನು ದುರಸ್ಥಿಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ಆಗುಹೋಗುಗಳಿಗೆ ಅಧಿಕಾರಿಗಳೇ ನೇರಹೊಣೆಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಅನಿವಾಸಿಗಳಿಗಾಗಿ ಜಾಗೃತಿ ಸಂದೇಶ: “ಸಂಯಮವೇ ಸುಕ್ಷೇಮ”-ಕ್ಷಣಿಕ ಕೋಪಕ್ಕೆ ಬಲಿಯಾಗಬೇಡಿ
ವಿಶೇಷ ವರದಿ: ಅನಿವಾಸಿ ಕನ್ನಡಿಗರ ಬದುಕು – ಆಡಂಬರದ ಆಕರ್ಷಣೆಗಿಂತ ಭವಿಷ್ಯದ ಭದ್ರತೆ ಮುಖ್ಯ
ಅಲ್ಲಾ ಸ್ವಾಮಿ, ಯುದ್ಧಕ್ಕೆ ಯಾಕೆ ಹುಲ್ಲು?” ಡಿ.ಪಿ ಬೈತಾರ್
ಶಾಂತಿ ಮತ್ತು ಸಹಬಾಳ್ವೆಯ ‘ಈದ್ ಉಲ್ ಫಿತರ್’ ವಿಶೇಷ ಸಂದೇಶ
ವಾರದೊಳಗೆ ಮೂರು ಆತ್ಮಹತ್ಯೆ ಪ್ರಕರಣ!- ಮುಸ್ಲಿಂ ಯುವಕರಿಗೇನಾಗಿದೆ..?
ನಿಮ್ಮ ಕಷ್ಟಗಳಿಗೆ ಪರಿಹಾರ ಬೇಕೇ..? ಈ ಮಸೀದಿಗೆ ಬನ್ನಿರಿ….!!!
ಸಮಸ್ತ: ಶತಮಾನೋತ್ಸವದ ಹೆಜ್ಜೆ ಗುರುತುಗಳು
ಸುಲ್ತಾನುಲ್ ಉಲಮಾ ಎಪಿ ಉಸ್ತಾದರ ಮೂರನೇ ಕೇರಳ ಯಾತ್ರೆ- “ಮನುಷ್ಯರೊಂದಿಗೆ” ಎಂಬ ಮಾನವೀಯ ಸಂದೇಶದ ಮಹಾ ಪಯಣ
‘ಬೆಲ್ಯೆಚ್ಚ ಅಸ್ಸಲಾಮು ಅಲೈಕುಂ’ ಪ್ರೀತಿಯ ಅಣ್ಣನ ಖಬರಿನ ಬಳಿ ತಂಗಿಯ ಸಲಾಂ
ಮುಅಲ್ಲಿಮ್ ವಿಭಾಗದ ಪ್ರತಿಭೆಗಳನ್ನು ಸಮುದಾಯ ಗುರುತಿಸಲಿ