ಮಂಗಳೂರು: ಕರ್ನಾಟಕ ಇತಿಹಾಸದಲ್ಲಿ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಮಂಗಳೂರಿನ ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ದಿನದಿಂದ ದಿನಕ್ಕೆ ಬಹಳ ಆತಂಕಕಾರಿ ಬೆಳವಣಿಗೆ ಸೃಷ್ಟಿಸುತ್ತಿರುವ ಡ್ರಗ್ಸ್ ಜಾಲ ಹಲವಾರು ಕುಟುಂಬವನ್ನು ಚಿಂತೆಗೀಡು ಮಾಡಿದೆ.
ವಿದ್ಯಾರ್ಥಿಗಳ, ಯುವಕರ ಬೆಳವಣಿಗೆಯಲ್ಲಿ ಮಾರಕವಾಗಿ ಪರಿಣಮಿಸುತ್ತಿರುವ ಡ್ರಗ್ಸ್. ಈ ಸಂದರ್ಭದಲ್ಲಿ
75 ಕೋಟಿ ಮೌಲ್ಯದ ಮಾದಕ ವಸ್ತು ಜಾಲ ಬೇಧಿಸಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್ ಮಂಗಳೂರು ಝೋನ್ ಸಮಿತಿಯಿಂದ ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್, ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್ ಹಾಗೂ ರವಿಶಂಕರ್, ಎಸಿಪಿ ಮನೋಜ್ ಕುಮಾರ್, ಇನ್ಸ್ಪೆಕ್ಟರ್ ರಫೀಕ್ ಹಾಗೂ ಸಬ್ ಇನ್ಸ್ ಪೆಕ್ಟರ್ ಗಳಾದ ರಾಜೇಂದ್ರ,ಶರಣಪ್ಪ, ಮೂವತ್ತರಷ್ಟು ಸಿಬ್ಬಂದಿಗಳಿಗೆ ವಿಶೇಷ ಗೌರವ ನೀಡಿ ಸನ್ಮಾನ ಮಾಡಲಾಯಿತು.
ನಿಯೋಗದಲ್ಲಿ ಮುಸ್ಲಿಂ ಜಮಾಅತ್ ನಾಯಕರಾದ ಬಿಎ ಅಬ್ದುಲ್ ನಾಸಿರ್ ಲಕ್ಕೀಸ್ಟಾರ್, ವಿ ಎ ಮುಹಮ್ಮದ್ ಸಖಾಫಿ, ಸಲೀಂ ಅಡ್ಯಾರ್ ಪದವು, ಅಬ್ದುಲ್ ಹಮೀದ್, ಎಸ್ ಎಸ್ ಎಫ್ ರಾಜ್ಯ ನಾಯಕರಾದ ಅಲಿ ತುರ್ಕಳಿಕೆ, ಇರ್ಷಾದ್ ಹಾಜಿ ಗೂಡಿನಬಳಿ, ಎಸ್ ವೈ ಎಸ್ ನಾಯಕರಾದ ಸತ್ತಾರ್ ಸಖಾಫಿ, ನಝೀರ್ ಲೂಲು, ಹಸನ್ ಪಾಂಡೇಶ್ವರ, ಕೆ ಸಿ ಸುಲೖಮಾನ್ ಮುಸ್ಲಿಯಾರ್, ಜಬ್ಬಾರ್ ಕಣ್ಣೂರು, ಸಿದ್ದೀಕ್ ಟೈಲರ್, ರಷೀದ್ IBMಉಪಸ್ಥಿತರಿದ್ದರು.
ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಕಾರ್ಯಕ್ರಮ ನಿರೂಪಿಸಿ ನವಾಜ್ ಸಖಾಫಿ ಅಡ್ಯಾರ್ ಪದವು ಧನ್ಯವಾದ ಮಾಡಿದರು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ