ಬೆಂಗಳೂರು: ಸುನ್ನಿ ಸಂಘಟನೆಗಳ ಅಧೀನದಲ್ಲಿ ಖುದ್ದುಸಾಬ್ ಈದ್ಗಾ ಮೈದಾನದಲ್ಲಿ ಆಯೋಜಿಸಿದ್ದ ರೂಹಾನಿ ಇಜ್ತಿಮಾದ ಭಾಗವಾಗಿ ನಡೆದ ಗ್ರ್ಯಾಂಡ್ ಇಫ್ತಾರ್ ಸಂಗಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಜನರು ಭಾಗವಹಿಸಿದರು. ಇದು ಬೆಂಗಳೂರಿನ ಅತಿದೊಡ್ಡ ಇಫ್ತಾರ್ ಸಂಗಮದಲ್ಲೊಂದಾಗಿತ್ತು.
ಇಫ್ತಾರ್ಗಾಗಿ ವಿವಿಧ ಮದರಸಾಗಳಿಂದ ಸಿಹಿತಿಂಡಿಗಳ ಸಂಗ್ರಹವು ಇಫ್ತಾರನ್ನು ಹೆಚ್ಚು ಜನಪ್ರಿಯಗೊಳಿಸಿತು.
ಇಫ್ತಾರ್ನಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್, ಡಾ. ಅಬ್ದುಲ್ ಹಕೀಮ್ ಅಝ್ಹರಿ, .ಎನ್. ಕೆ. ಎಂ ಶಾಫಿ ಸಅದಿ,ಜನಾಬ್ ಉಸ್ಮಾನ್ ಶರೀಫ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ಆತ್ಮೀಯ ಸಂಘಮದ ಭಾಗವಾಗಿ ಸಂಜೆ ನಡೆದ ಫ್ಯಾಮಿಲಿ ಮೀಟ್ ನಲ್ಲಿ ನೂರಾರು ಕುಟುಂಬಗಳು ಭಾಗವಹಿಸಿತು. ಸಯ್ಯಿದ್ ಇಬ್ರಾಹಿಂ ಬಾಫಕಿ ತಂಙಳ್ ಪ್ರಾರ್ಥನೆಯೊಂದಿಗೆ ಸಭೆಗೆ ಚಾಲನೆ ನೀಡಿದರು. ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಉದ್ಘಾಟಿಸಿದರು. ಫಾಝಿಲ್ ನೂರಾನಿ ಕ್ಯಾಲಿಕಟ್ ವಿಷಯ ಮಂಡನೆ ನಡೆಸಿದರು. ಸನ್ಮಾನ್ಯ ಸ್ಪೀಕರ್ ಜನಾಬ್ ಯು.ಟಿ.ಖಾದರ್, ಎಸ್.ಎಂ.ಎ. ಅಧ್ಯಕ್ಷರಾದ ಹಕೀಮ್ ಆರ್.ಟಿ. ನಗರ, ಎಸ್. ಅಬ್ದುರ್ರಹ್ಮಾನ್ ಹಾಜಿ, ಅನಸ್ ಸಿದ್ದಿಕಿ, ಮತ್ತು ಜಾಫರ್ ನೂರಾನಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು