ಬೆಂಗಳೂರು: ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ದೌರ್ಜನ್ಯಗಳು ರಾಕ್ಷಸೀಯವಾಗಿದ್ದು, ವಿಶ್ವದ ಜನತೆಯು ಇದರ ವಿರುದ್ಧ ಜಾಗೃತಗೊಳ್ಳಬೇಕು ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ.

ಒಪ್ಪಂದಗಳನ್ನು ಉಲ್ಲಂಘಿಸಿ ಇಸ್ರೇಲ್ ಮುಂದುವರಿಸುತ್ತಿರುವ ಹಿಂಸಾಚಾರವು ದುರಹಂಕಾರದ ಸಂಕೇತವಾಗಿದ್ದು, ಜಗತ್ತು ಇದನ್ನು ಒಗ್ಗಟ್ಟಾಗಿ ವಿರೋಧಿಸಬೇಕೆಂದು ಕಾಂತಪುರಂ ಹೇಳಿದರು.
ಪ್ರಾರ್ಥನೆಯು ವಿಶ್ವಾಸಿಗಳ ಅತ್ಯಂತ ದೊಡ್ಡ ಆಯುಧವಾಗಿದ್ದು, ಪವಿತ್ರ ಮಾಸದಲ್ಲಿ ನಾವು ವಿಶ್ವ ಶಾಂತಿ ಮತ್ತು ಪ್ಯಾಲೆಸ್ತೀನ್ ವಿಮೋಚನೆಗಾಗಿ ಪ್ರಾರ್ಥಿಸಬೇಕೆಂದು ಎ.ಪಿ ಉಸ್ತಾದರು ಬೆಂಗಳೂರಿನಲ್ಲಿ ನಡೆದ ರೂಹಾನಿ ಇಜ್ತಿಮಾದ ಸಮಾರೋಪ ಸಮಾರಂಭವನ್ನು ಉದ್ಘಾಟಿಸುತ್ತಾ ಹೇಳಿದರು.

ಸಂಜೆ 4 ಗಂಟೆಗೆ ಆರಂಭವಾದ ಕಾರ್ಯಕ್ರಮ ಬೆಳಗಿನ ಜಾವ 4 ಗಂಟೆಗೆ ಮುಕ್ತಾಯವಾಯಿತು. ಸಯ್ಯಿದ್ ಝೈನುದ್ದೀನ್ ತಂಙಳ್ ಕೂರಿಕುಝಿ ದಿಕ್ರ್ ಮಜ್ಲಿಸ್ ಮತ್ತು ಸಮಾರೋಪ ಪ್ರಾರ್ಥನೆಗೆ ನೇತೃತ್ವ ನೀಡಿದರು.
ಡಾ. ಮುಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ, ಡಾ. ಮುಹಮ್ಮದ್ ಅಫ್ಸಲುದ್ದೀನ್ ಜುನೈದ್(ಸಿರಾಜ್ ಬಾಬಾ), ಹಝ್ರತ್ ಮೌಲಾನಾ ಮುಹಮ್ಮದ್ ಹಾರೂನ್, ಸನ್ಮಾನ್ಯ ಸ್ಪೀಕರ್ ಯು.ಟಿ ಖಾದರ್, ಸಿ.ಎಂ. ಇಬ್ರಾಹಿಂ, ಎನ್.ಕೆ.ಎಂ ಶಾಫಿ ಸಅದಿ, ಎಸ್.ಅಬ್ದುಲ್ ರಹ್ಮಾನ್ ಹಾಜಿ ಮತ್ತಿತರರು ಮಾತನಾಡಿದರು.
ಮುಸ್ಲಿಂ ಜಮಾಅತ್ ಅಧ್ಯಕ್ಷ ಶಬೀರಲಿ ಹಝ್ರತ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಸ್ಮಾನ್ ಶರೀಫ್ ಸ್ವಾಗತಿಸಿ, ಜಲೀಲ್ ಹಾಜಿ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ