ಬೆಂಗಳೂರು: ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ದೌರ್ಜನ್ಯಗಳು ರಾಕ್ಷಸೀಯವಾಗಿದ್ದು, ವಿಶ್ವದ ಜನತೆಯು ಇದರ ವಿರುದ್ಧ ಜಾಗೃತಗೊಳ್ಳಬೇಕು ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ.

ಒಪ್ಪಂದಗಳನ್ನು ಉಲ್ಲಂಘಿಸಿ ಇಸ್ರೇಲ್ ಮುಂದುವರಿಸುತ್ತಿರುವ ಹಿಂಸಾಚಾರವು ದುರಹಂಕಾರದ ಸಂಕೇತವಾಗಿದ್ದು, ಜಗತ್ತು ಇದನ್ನು ಒಗ್ಗಟ್ಟಾಗಿ ವಿರೋಧಿಸಬೇಕೆಂದು ಕಾಂತಪುರಂ ಹೇಳಿದರು.
ಪ್ರಾರ್ಥನೆಯು ವಿಶ್ವಾಸಿಗಳ ಅತ್ಯಂತ ದೊಡ್ಡ ಆಯುಧವಾಗಿದ್ದು, ಪವಿತ್ರ ಮಾಸದಲ್ಲಿ ನಾವು ವಿಶ್ವ ಶಾಂತಿ ಮತ್ತು ಪ್ಯಾಲೆಸ್ತೀನ್ ವಿಮೋಚನೆಗಾಗಿ ಪ್ರಾರ್ಥಿಸಬೇಕೆಂದು ಎ.ಪಿ ಉಸ್ತಾದರು ಬೆಂಗಳೂರಿನಲ್ಲಿ ನಡೆದ ರೂಹಾನಿ ಇಜ್ತಿಮಾದ ಸಮಾರೋಪ ಸಮಾರಂಭವನ್ನು ಉದ್ಘಾಟಿಸುತ್ತಾ ಹೇಳಿದರು.

ಸಂಜೆ 4 ಗಂಟೆಗೆ ಆರಂಭವಾದ ಕಾರ್ಯಕ್ರಮ ಬೆಳಗಿನ ಜಾವ 4 ಗಂಟೆಗೆ ಮುಕ್ತಾಯವಾಯಿತು. ಸಯ್ಯಿದ್ ಝೈನುದ್ದೀನ್ ತಂಙಳ್ ಕೂರಿಕುಝಿ ದಿಕ್ರ್ ಮಜ್ಲಿಸ್ ಮತ್ತು ಸಮಾರೋಪ ಪ್ರಾರ್ಥನೆಗೆ ನೇತೃತ್ವ ನೀಡಿದರು.
ಡಾ. ಮುಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ, ಡಾ. ಮುಹಮ್ಮದ್ ಅಫ್ಸಲುದ್ದೀನ್ ಜುನೈದ್(ಸಿರಾಜ್ ಬಾಬಾ), ಹಝ್ರತ್ ಮೌಲಾನಾ ಮುಹಮ್ಮದ್ ಹಾರೂನ್, ಸನ್ಮಾನ್ಯ ಸ್ಪೀಕರ್ ಯು.ಟಿ ಖಾದರ್, ಸಿ.ಎಂ. ಇಬ್ರಾಹಿಂ, ಎನ್.ಕೆ.ಎಂ ಶಾಫಿ ಸಅದಿ, ಎಸ್.ಅಬ್ದುಲ್ ರಹ್ಮಾನ್ ಹಾಜಿ ಮತ್ತಿತರರು ಮಾತನಾಡಿದರು.
ಮುಸ್ಲಿಂ ಜಮಾಅತ್ ಅಧ್ಯಕ್ಷ ಶಬೀರಲಿ ಹಝ್ರತ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಸ್ಮಾನ್ ಶರೀಫ್ ಸ್ವಾಗತಿಸಿ, ಜಲೀಲ್ ಹಾಜಿ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ತಬೂಕ್ ಘಟಕದ ವಾರ್ಷಿಕ ಮಹಾಸಭೆ
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಗಲ್ಫ್ ರಾಷ್ಟ್ರಗಳಿಂದ 8.43 ಲಕ್ಷ ಭಾರತೀಯರು ವಾಪಸ್
ಶಾಫಿ ಸಅದಿ ವಿರುದ್ಧ ಸುಳ್ಳು ಸುದ್ದಿ ಪ್ರಕಟ: ‘ಮಿನಾರಂ’ ಡಿಜಿಟಲ್ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ
ಎಪ್ರಿಲ್ 12: ಮಾದರಿ ಮದುವೆ ಅಭಿಯಾನ ಸಮಾರೋಪದ ಪ್ರಚಾರಾರ್ಥ ಸಾಂಘಿಕ ನಾಯಕರ ಸಭೆ
ಕಾಟಿಪಳ್ಳ: ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ- ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ
ಶರಫುಲ್ ಉಲಮಾ 7ನೇ ವಾರ್ಷಿಕ ಅನುಸ್ಮರಣೆ- ಮೇ 13, 14 ರಂದು ವಿವಿಧ ಕಾರ್ಯಕ್ರಮ
ಬಶೀರ್ ಕಿನ್ಯ ಅವರಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ: ಸಾಹಿತ್ಯ ಲೋಕದ ಬಹುಭಾಷಾ ಪಂಡಿತನಿಗೆ ಒಲಿದ ಮನ್ನಣೆ
ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣ- ಐತಿಹಾಸಿಕ ‘ಮಕ್ಕಳ ಸ್ನೇಹಿ ಸಾರಿಗೆ’ ಯೋಜನೆ ಸಿದ್ಧ
ಕಿನ್ಯಾ ‘ಗೋಲ್ಡನ್ ಹೆಲ್ತ್’ ಶಿಲಾನ್ಯಾಸ: ರೋಗ ಬರದಂತೆ ತಡೆಯುವ ಜನಜಾಗೃತಿ ಇಂದಿನ ಅಗತ್ಯ- ಸ್ಪೀಕರ್ ಯು.ಟಿ. ಖಾದರ್
ಡಿಕೆಎಸ್ಸಿ ಅಲ್-ಖೋಬರ್ ಘಟಕ: ಮಾಸಿಕ ಸಭೆ ಹಾಗೂ ಗಣ್ಯರಿಗೆ ಸನ್ಮಾನ