ನಾವುಂದ: ಇಸ್ಲಾಮಿಕ್ ಎಜ್ಯುಕೇಷನಲ್ ಬೋರ್ಡು ಆಫ್ ಇಂಡಿಯಾ ಇದರ ಅಂಗಿಕಾರದೊಂದಿಗೆ ಕಾರ್ಯಾಚರಿಸುತ್ತಿರುವ ನಾವುಂದ – ಕೋಯನಗರ ಬುಸ್ತಾನುಲ್ ಉಲೂಂ ಮದ್ರಸ ಪ್ರಾರಂಭೋತ್ಸವ “ಫತ್’ಹೇ ಮುಬಾರಕ್ -2018” ಕಾರ್ಯಕ್ರಮವು ಜೂನ್ 24ನೇ ಆದಿತ್ಯವಾರ ಸಂಜೆ ಬಹಳ ವಿಜೃಂಭಣೆಯಿಂದ ನಡೆಯಿತು.
ಮಗರಿಬ್ ನಮಾಝಿನ ಬಳಿಕ ಮದ್ರಸ ಸಭಾಂಗಣದಲ್ಲಿ ನಡೆದ ಸದ್ರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಯನಗರ ಮೊಹಲ್ಲಾ ನಿಕಟ ಪೂರ್ವ ಅಧ್ಯಕ್ಷ ಅಬ್ಬಾಸ್ ಹಾಜಿ ವಹಿಸಿದರು. ಕಾರ್ಯಕ್ರಮವನ್ನು ಸ್ಥಳೀಯ ಮುಖ್ಯೋಪಾಧ್ಯಾಯರಾದ ಕೊಂಬಾಳಿ ಕೆ.ಎಂ.ಎಚ್. ಝುಹುರಿ ಉದ್ಘಾಟಿಸಿ, ಫತ್’ಹೇ ಮುಬಾರಕ್ ಬಗ್ಗೆ ವಿವರಿಸಿದರು. ಅಧ್ಯಾಪಕರಾದ ಮುನೀರ್ ಸಖಾಫಿ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಬದ್’ರುಲ್ ಹುದಾ ವೆಲ್ಫೇರ್ ಸಂಘದ ಪ್ರತಿನಿಧಿಯಾಗಿ ಇಖ್ಬಾಲ್ ದಾರಿಮಿ ಮಾತನಾಡಿ ಶುಭಹಾರೈಸಿದರು.
ಕೋಯನಗರ ಮೊಹಲ್ಲಾ ನಿಕಟ ಪೂರ್ವ ಅಧ್ಯಕ್ಷರಾದ ಮುಹಮ್ಮದ್ ಹಾಜಿ, ಮಾಜಿ ಕಾರ್ಯದರ್ಶಿ ಯೂಸುಫ್ ಹಾಜಿ, ಮೊಹಲ್ಲಾ ಸಮಿತಿ ಸದಸ್ಯ ಹಮೀದ್ ಮುಸ್ಲಿಯಾರ್, ಬದ್’ರುಲ್ ವೆಲ್ಫೇರ್ ಸಮಿತಿ ಅಧ್ಯಕ್ಷ ಮುಲ್ಲಾ ಸಮೀರ್, ಹಂಝ WFK, ಹಾಗೂ
ಊರಿನ ಹಿರಿಯ ಮುಖಂಡರು, ಜಮಾಅತ್ ಕಮಿಟಿ ನಾಯಕರು, ಬದ್’ರುಲ್ ಹುದಾ ವೆಲ್ಫೇರ್ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಬದ್’ರ್ ಮೌಲೀದ್ ಪಾರಾಯಣ ಗೈದು, ವಿಶೇಷ ತಬರ್ರುಖ್ ವಿತರಿಸಲಾಯಿತು. ಮೊಹಲ್ಲಾ ಕಮಿಟಿ ಪ್ರ.ಕಾರ್ಯದರ್ಶಿ ಅಡ್ವಕೇಟ್ ಕೆ.ಎಂ. ಇಲ್ಯಾಸ್ ನಾವುಂದ ಸ್ವಾಗತಿಸಿ, ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೈತಡ್ಕ ಉರೂಸ್: ಸಾವಿರ ಕೆಜಿ ಸಕ್ಕರೆ ಸಂಗ್ರಹಿಸಿ ಗಮನ ಸೆಳೆದ ‘ಮಾಲೆಂಗ್ರಿ ಫ್ರೆಂಡ್ಸ್’ ವಾಟ್ಸಾಪ್ ತಂಡ
ಡಿಕೆಯಸ್ಸಿ ತಬೂಕ್ ಘಟಕದ ವಾರ್ಷಿಕ ಮಹಾಸಭೆ
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಗಲ್ಫ್ ರಾಷ್ಟ್ರಗಳಿಂದ 8.43 ಲಕ್ಷ ಭಾರತೀಯರು ವಾಪಸ್
ಶಾಫಿ ಸಅದಿ ವಿರುದ್ಧ ಸುಳ್ಳು ಸುದ್ದಿ ಪ್ರಕಟ: ‘ಮಿನಾರಂ’ ಡಿಜಿಟಲ್ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ
ಎಪ್ರಿಲ್ 12: ಮಾದರಿ ಮದುವೆ ಅಭಿಯಾನ ಸಮಾರೋಪದ ಪ್ರಚಾರಾರ್ಥ ಸಾಂಘಿಕ ನಾಯಕರ ಸಭೆ
ಕಾಟಿಪಳ್ಳ: ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ- ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ
ಶರಫುಲ್ ಉಲಮಾ 7ನೇ ವಾರ್ಷಿಕ ಅನುಸ್ಮರಣೆ- ಮೇ 13, 14 ರಂದು ವಿವಿಧ ಕಾರ್ಯಕ್ರಮ
ಬಶೀರ್ ಕಿನ್ಯ ಅವರಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ: ಸಾಹಿತ್ಯ ಲೋಕದ ಬಹುಭಾಷಾ ಪಂಡಿತನಿಗೆ ಒಲಿದ ಮನ್ನಣೆ
ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣ- ಐತಿಹಾಸಿಕ ‘ಮಕ್ಕಳ ಸ್ನೇಹಿ ಸಾರಿಗೆ’ ಯೋಜನೆ ಸಿದ್ಧ
ಕಿನ್ಯಾ ‘ಗೋಲ್ಡನ್ ಹೆಲ್ತ್’ ಶಿಲಾನ್ಯಾಸ: ರೋಗ ಬರದಂತೆ ತಡೆಯುವ ಜನಜಾಗೃತಿ ಇಂದಿನ ಅಗತ್ಯ- ಸ್ಪೀಕರ್ ಯು.ಟಿ. ಖಾದರ್