ನಾವುಂದ: ಇಸ್ಲಾಮಿಕ್ ಎಜ್ಯುಕೇಷನಲ್ ಬೋರ್ಡು ಆಫ್ ಇಂಡಿಯಾ ಇದರ ಅಂಗಿಕಾರದೊಂದಿಗೆ ಕಾರ್ಯಾಚರಿಸುತ್ತಿರುವ ನಾವುಂದ – ಕೋಯನಗರ ಬುಸ್ತಾನುಲ್ ಉಲೂಂ ಮದ್ರಸ ಪ್ರಾರಂಭೋತ್ಸವ “ಫತ್’ಹೇ ಮುಬಾರಕ್ -2018” ಕಾರ್ಯಕ್ರಮವು ಜೂನ್ 24ನೇ ಆದಿತ್ಯವಾರ ಸಂಜೆ ಬಹಳ ವಿಜೃಂಭಣೆಯಿಂದ ನಡೆಯಿತು.
ಮಗರಿಬ್ ನಮಾಝಿನ ಬಳಿಕ ಮದ್ರಸ ಸಭಾಂಗಣದಲ್ಲಿ ನಡೆದ ಸದ್ರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಯನಗರ ಮೊಹಲ್ಲಾ ನಿಕಟ ಪೂರ್ವ ಅಧ್ಯಕ್ಷ ಅಬ್ಬಾಸ್ ಹಾಜಿ ವಹಿಸಿದರು. ಕಾರ್ಯಕ್ರಮವನ್ನು ಸ್ಥಳೀಯ ಮುಖ್ಯೋಪಾಧ್ಯಾಯರಾದ ಕೊಂಬಾಳಿ ಕೆ.ಎಂ.ಎಚ್. ಝುಹುರಿ ಉದ್ಘಾಟಿಸಿ, ಫತ್’ಹೇ ಮುಬಾರಕ್ ಬಗ್ಗೆ ವಿವರಿಸಿದರು. ಅಧ್ಯಾಪಕರಾದ ಮುನೀರ್ ಸಖಾಫಿ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಬದ್’ರುಲ್ ಹುದಾ ವೆಲ್ಫೇರ್ ಸಂಘದ ಪ್ರತಿನಿಧಿಯಾಗಿ ಇಖ್ಬಾಲ್ ದಾರಿಮಿ ಮಾತನಾಡಿ ಶುಭಹಾರೈಸಿದರು.
ಕೋಯನಗರ ಮೊಹಲ್ಲಾ ನಿಕಟ ಪೂರ್ವ ಅಧ್ಯಕ್ಷರಾದ ಮುಹಮ್ಮದ್ ಹಾಜಿ, ಮಾಜಿ ಕಾರ್ಯದರ್ಶಿ ಯೂಸುಫ್ ಹಾಜಿ, ಮೊಹಲ್ಲಾ ಸಮಿತಿ ಸದಸ್ಯ ಹಮೀದ್ ಮುಸ್ಲಿಯಾರ್, ಬದ್’ರುಲ್ ವೆಲ್ಫೇರ್ ಸಮಿತಿ ಅಧ್ಯಕ್ಷ ಮುಲ್ಲಾ ಸಮೀರ್, ಹಂಝ WFK, ಹಾಗೂ
ಊರಿನ ಹಿರಿಯ ಮುಖಂಡರು, ಜಮಾಅತ್ ಕಮಿಟಿ ನಾಯಕರು, ಬದ್’ರುಲ್ ಹುದಾ ವೆಲ್ಫೇರ್ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಬದ್’ರ್ ಮೌಲೀದ್ ಪಾರಾಯಣ ಗೈದು, ವಿಶೇಷ ತಬರ್ರುಖ್ ವಿತರಿಸಲಾಯಿತು. ಮೊಹಲ್ಲಾ ಕಮಿಟಿ ಪ್ರ.ಕಾರ್ಯದರ್ಶಿ ಅಡ್ವಕೇಟ್ ಕೆ.ಎಂ. ಇಲ್ಯಾಸ್ ನಾವುಂದ ಸ್ವಾಗತಿಸಿ, ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ