ನಾವುಂದ: ಇಸ್ಲಾಮಿಕ್ ಎಜ್ಯುಕೇಷನಲ್ ಬೋರ್ಡು ಆಫ್ ಇಂಡಿಯಾ ಇದರ ಅಂಗಿಕಾರದೊಂದಿಗೆ ಕಾರ್ಯಾಚರಿಸುತ್ತಿರುವ ನಾವುಂದ – ಕೋಯನಗರ ಬುಸ್ತಾನುಲ್ ಉಲೂಂ ಮದ್ರಸ ಪ್ರಾರಂಭೋತ್ಸವ “ಫತ್’ಹೇ ಮುಬಾರಕ್ -2018” ಕಾರ್ಯಕ್ರಮವು ಜೂನ್ 24ನೇ ಆದಿತ್ಯವಾರ ಸಂಜೆ ಬಹಳ ವಿಜೃಂಭಣೆಯಿಂದ ನಡೆಯಿತು.
ಮಗರಿಬ್ ನಮಾಝಿನ ಬಳಿಕ ಮದ್ರಸ ಸಭಾಂಗಣದಲ್ಲಿ ನಡೆದ ಸದ್ರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಯನಗರ ಮೊಹಲ್ಲಾ ನಿಕಟ ಪೂರ್ವ ಅಧ್ಯಕ್ಷ ಅಬ್ಬಾಸ್ ಹಾಜಿ ವಹಿಸಿದರು. ಕಾರ್ಯಕ್ರಮವನ್ನು ಸ್ಥಳೀಯ ಮುಖ್ಯೋಪಾಧ್ಯಾಯರಾದ ಕೊಂಬಾಳಿ ಕೆ.ಎಂ.ಎಚ್. ಝುಹುರಿ ಉದ್ಘಾಟಿಸಿ, ಫತ್’ಹೇ ಮುಬಾರಕ್ ಬಗ್ಗೆ ವಿವರಿಸಿದರು. ಅಧ್ಯಾಪಕರಾದ ಮುನೀರ್ ಸಖಾಫಿ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಬದ್’ರುಲ್ ಹುದಾ ವೆಲ್ಫೇರ್ ಸಂಘದ ಪ್ರತಿನಿಧಿಯಾಗಿ ಇಖ್ಬಾಲ್ ದಾರಿಮಿ ಮಾತನಾಡಿ ಶುಭಹಾರೈಸಿದರು.
ಕೋಯನಗರ ಮೊಹಲ್ಲಾ ನಿಕಟ ಪೂರ್ವ ಅಧ್ಯಕ್ಷರಾದ ಮುಹಮ್ಮದ್ ಹಾಜಿ, ಮಾಜಿ ಕಾರ್ಯದರ್ಶಿ ಯೂಸುಫ್ ಹಾಜಿ, ಮೊಹಲ್ಲಾ ಸಮಿತಿ ಸದಸ್ಯ ಹಮೀದ್ ಮುಸ್ಲಿಯಾರ್, ಬದ್’ರುಲ್ ವೆಲ್ಫೇರ್ ಸಮಿತಿ ಅಧ್ಯಕ್ಷ ಮುಲ್ಲಾ ಸಮೀರ್, ಹಂಝ WFK, ಹಾಗೂ
ಊರಿನ ಹಿರಿಯ ಮುಖಂಡರು, ಜಮಾಅತ್ ಕಮಿಟಿ ನಾಯಕರು, ಬದ್’ರುಲ್ ಹುದಾ ವೆಲ್ಫೇರ್ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಬದ್’ರ್ ಮೌಲೀದ್ ಪಾರಾಯಣ ಗೈದು, ವಿಶೇಷ ತಬರ್ರುಖ್ ವಿತರಿಸಲಾಯಿತು. ಮೊಹಲ್ಲಾ ಕಮಿಟಿ ಪ್ರ.ಕಾರ್ಯದರ್ಶಿ ಅಡ್ವಕೇಟ್ ಕೆ.ಎಂ. ಇಲ್ಯಾಸ್ ನಾವುಂದ ಸ್ವಾಗತಿಸಿ, ವಂದಿಸಿದರು.















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ