ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ವಿಷಯವನ್ನು ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂಪಾಠಕ್ ಖಚಿತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊನೆಗೂ ಹೈಕಮಾಂಡ್ ಕ್ರಮ ಕೈಗೊಂಡಿದೆ.
ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ.
ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಸ್ತು ಸಮಿತಿ ಆದೇಶದಲ್ಲಿ ತಿಳಿಸಲಾಗಿದೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ