ಮಂಗಳೂರು: ಇಲ್ಲಿನ ಕೆಲವು ಬಡ ವ್ಯಾಪಾರಸ್ಥರ ಫೋಟೋ ಹಾಕಿ ಜೀವ ಬೆದರಿಕೆಯೊಡ್ಡುವ ಪೋಸ್ಟರೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರಕಾರ ಮಂಗಳೂರಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂದು ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಆಗ್ರಹಿಸಿದ್ದಾರೆ.
ಮುಸಲ್ಮಾನರ ಪವಿತ್ರ ರಂಝಾನ್ ತಿಂಗಳು ಆಗಮಿಸುವಾಗ ಕೆಲವು ಸಮಾಜಘಾತುಕ ಶಕ್ತಿಗಳು ಅಶಾಂತಿಗಾಗಿ ಹಾತೊರೆಯುತ್ತಾ ಇರುತ್ತದೆ. ಕಳೆದ ಕೆಲವು ದಿನಗಳಲ್ಲಿ ಮಂಗಳೂರು ನಗರದಲ್ಲಿ ಕೆಲವು ದುಷ್ಟ ಶಕ್ತಿಗಳು ಬೀಫ್ ಮಾರಾಟಗಾರರಿಗೆ ಕಿರಿಕ್ ನೀಡುತ್ತಿದೆ. ಅಲ್ಲದೇ, ಸಂಘಟನೆಯ ಕೆಲವರಿಂದ ಪತ್ರಿಕಾಗೋಷ್ಠಿಯನ್ನು ಕಾಣಲು ಸಾಧ್ಯವಾಗಿದೆ. ಇಲ್ಲಿ ಕಾನೂನು ವ್ಯವಸ್ಥೆಯನ್ನು ಕಾಪಾಡಲು ಪೋಲೀಸ್ ಇಲಾಖೆ ಸಕ್ರಿಯವಾಗಿದೆ. ಆದರೂ, ಅನೈತಿಕ ಪೋಲೀಸ್ ಗಿರಿ ನಡೆಸುವ ಇಂತಹ ಶಕ್ತಿಗಳ ಅಟ್ಟಹಾಸ ಮಿತಿ ಮೀರುತ್ತಿದೆ.
ಭೀಪ್ ರಫ್ತಿನಲ್ಲಿ ಕೇಂದ್ರದ ಮೋದಿ ಸರಕಾವೇ ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನದಲ್ಲಿದ್ದು, ಹಲವು ಬಿಜೆಪಿ ಬೆಂಬಲಿತರ ಮಾಲಕತ್ವದ ಬೀಫ್ ಕಂಪೆನಿಗಳು ಮುಸ್ಲಿಂ ನಾಮದಲ್ಲಿ ವಿದೇಶಕ್ಕೆ ಬೀಫ್ ರಫ್ತು ಮಾಡುತ್ತಿದೆ. ಇದರ ವಿರುಧ್ಧ ಧ್ವನಿ ಎತ್ತಲು ಸಾಧ್ಯವಾಗದ ಕೆಲವು ಶಕ್ತಿಗಳು ಮಂಗಳೂರಲ್ಲಿ ಅನಾವಶ್ಯಕ ಗೋಗೆರೆಯುತ್ತಿದ್ದಾರೆ.ಅಲ್ಲದೇ ವ್ಯಾಪಾರಸ್ಥರ ವಿರುದ್ಧ ಜೀವ ಬೆದರಿಕೆಯ ಪೋಸ್ಟರ್ ಪ್ರಚಾರ ಮಾಡುತ್ತಿದ್ದಾರೆ.
ಇಂತಹ ಸಮಾಜ ಘಾತುಕ ಶಕ್ತಿಗಳ ಅನೈತಿಕ ಪೋಲೀಸ್ ಗಿರಿ ವಿರುದ್ಧ ಜಿಲ್ಲಾಡಳಿತ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಸರಕಾರ ಮಧ್ಯ ಪ್ರವೇಶಿಸಬೇಕು. ಅನೈತಿಕ ಪೋಲೀಸ್ ಗಿರಿ ನಿರ್ಮೂಲನೆಗಾಗಿ ಸ್ಥಾಪಿತವಾದ ಆ್ಯಂಟಿ ಕಮ್ಯೂನಲ್ ಸ್ಕಾಡ್ ಕೂಡಲೇ ಇಂತಹವರನ್ನು ಮಟ್ಟ ಹಾಕಬೇಕು.
ಮುಸ್ಲಿಮರ ಹಬ್ಬದ ಸಂದರ್ಭದಲ್ಲಿ ಮಂಗಳೂರಲ್ಲಿ ಆಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುವವರ ವಿರುಧ್ಧ ಸೂಕ್ತ ಕಾನೂನು ಕ್ರಮ ಜರುಗಿಸದಿದ್ದರೆ ಮಂದಿನ ಅನಾಹುತಕ್ಕೆ ಜಿಲ್ಲಾಡಳಿತ ನೇರ ಹೊಣೆಯಾಗಬೇಕಾಗಬಹುದು ಎಂದು ಅಶ್ರಫ್ ಕಿನಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದಿಂದ ಬೀಫ್ ರಫ್ತು ಮಾಡುತ್ತಿರುವ ಕೆಲವು ಹಿಂದೂಪರ ಕಂಪನಿಗಳು

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ