ಬೆಳ್ತಂಗಡಿ (ಮಾ-29): ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವ ಶಾಲಾ ಮುಖ್ಯ ಶಿಕ್ಷಕಿ ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಮೆನ್ ಇಂಡಿಯಾ ಮೂವ್ಮೆಂಟ್(WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ನೀಡಲಾಯಿತು.
ವಿದ್ಯಾರ್ಥಿನಿಯರು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಪರೀಕ್ಷೆ ಬರೆದು ಫೇಲ್ ಆದರೆ ಶಾಲೆಗೆ 100% ಶೇಕಡ ಫಲಿತಾಂಶ ಬರುವುದಿಲ್ಲ ಎಂಬ ಕಾರಣಕ್ಕೆ, ಅವರಿಗೆ ಹಾಲ್ ಟಿಕೆಟ್ ಕೊಡದೆ ಪರೀಕ್ಷೆ ಬರೆಯುವ ಅವಕಾಶ ತಪ್ಪಿಸಲಾಗಿದೆ ಎಂಬ ಗಂಭೀರ ಆರೋಪ ಈ ಶಾಲಾ ಸಿಬ್ಬಂದಿಗಳ ಮೇಲೆ ಇದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ತ ಸಿಬ್ಬಂದಿಗಳ ಮೇಲೆ ಕೇಸ್ ದಾಖಲಿಸಬೇಕು ಮತ್ತು ವಿದ್ಯಾರ್ಥಿನಿಯರಿಗೆ ಎಲ್ಲರಂತೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವಂತೆ ಮಾಡಬೇಕೆಂದು ಮನವಿ ಮಾಡಲಾಯಿತು.
ಇದರ ಪ್ರತಿಗಳನ್ನು ಶಾಲಾ ಶಿಕ್ಷಣ & ಸಾಕ್ಷರತೆ ಇಲಾಖೆ ಅಧಿಕಾರಿ, ಮಾನ್ಯ ಶಿಕ್ಷಣ ಸಚಿವರಿಗೆ, ಮುಖ್ಯ ಮಂತ್ರಿ ಗಳಿಗೆ, ರಾಜ್ಯಪಾಲರಿಗೆ ಇಮೇಲ್ ಮುಖಾಂತರ ಕಳುಹಿಸಲಾಯಿತು.
ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಶಮಾ ಆಲಿ ಉಜಿರೆ, ನಸೀಮಾ ಬೆಳ್ತಂಗಡಿ, ಸೌದಾ ಬೆಳ್ತಂಗಡಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ
ಪಿಎಫ್ಐ ಬ್ಯಾಂಕ್ ಖಾತೆ ಮುಟ್ಟುಗೋಲು: ಬೆಳ್ತಂಗಡಿಯಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ