ಜುಬೈಲ್ :ಕಾವಲ್ಕಟ್ಟೆ ಅಲ್-ಖಾದಿಸ ಇದರ ಜುಬೈಲ್ ಘಟಕದ ವತಿಯಿಂದ ಬೃಹತ್ ಇಫ್ತಾರ್ ಮೀಟ್ ಕಾರ್ಯಕ್ರಮವು ಇತ್ತೀಚೆಗೆ ಜುಬೈಲ್ ಅಲ್-ಫಲಾಹ್ ಮೈದಾನದಲ್ಲಿ ನಡೆಯಿತು. ಅಲ್-ಖಾದಿಸ ಸಂಸ್ಥೆಯ ಮುಖ್ಯಸ್ಥರಾದ ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೆಸಿಎಫ್ ರಾಷ್ಟ್ರೀಯ ನಾಯಕ ಆಸಿಫ್ ಗೂಡಿನಬಳಿ ಉದ್ಘಾಟಿಸಿದರು. ಮಜ್ಲಿಸ್ ಗಾಣೆಮಾರ್ ಮುದರ್ರಿಸ್ ಸಯ್ಯಿದ್ ತ್ವಾಹ ತಂಙಳ್ ನಅತೇ ಶರೀಫ್ ಹಾಗೂ ದುಆ ನೆರವೇರಿಸಿದರು. ಉದ್ಯಮಿ ನಝೀರ್ ಪಡುಬಿದ್ರಿ ಅಲ್-ಖಾದಿಸ ಸಂಸ್ಥೆಯ ಉದ್ದೇಶಗಳ ಬಗ್ಗೆ ವಿವರಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಝಕರಿಯ್ಯಾ ಜೋಕಟ್ಟೆ, ಶಹೀರ್ ಅಬ್ಬಾಸ್ ಮೊದಲಾದವರು ಭಾಗವಹಿಸಿದ್ದರು.
ಕೆಸಿಎಫ್ ಅಂತರಾಷ್ಟ್ರೀಯ ನಾಯಕ ಕಮರುದ್ದೀನ್ ಗೂಡಿನಬಳಿ ಸ್ವಾಗತಿಸಿ, ಸಿರಾಜ್ ಬಾರ್ಕೂರು ವಂದಿಸಿದರು. ಝೈನ್ ಪಡುಬಿದ್ರಿ ಕಿರಾಅತ್ ಪಠಿಸಿದರು. ಇಕ್ಬಾಲ್ ಮಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಸುಮಾರು 2000ಕ್ಕೂ ಅಧಿಕ ಮಂದಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು. ಜುಬೈಲ್ ಪರಿಸರದ ಎಲ್ಲಾ ಸಂಘ-ಸಂಸ್ಥೆಗಳ ನಾಯಕರು ಹಾಗೂ ಕಾರ್ಯಕರ್ತರು ಸ್ವಯಂ ಸೇವಕರಾಗಿ ಸಹಕರಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ