ಜುಬೈಲ್ :ಕಾವಲ್ಕಟ್ಟೆ ಅಲ್-ಖಾದಿಸ ಇದರ ಜುಬೈಲ್ ಘಟಕದ ವತಿಯಿಂದ ಬೃಹತ್ ಇಫ್ತಾರ್ ಮೀಟ್ ಕಾರ್ಯಕ್ರಮವು ಇತ್ತೀಚೆಗೆ ಜುಬೈಲ್ ಅಲ್-ಫಲಾಹ್ ಮೈದಾನದಲ್ಲಿ ನಡೆಯಿತು. ಅಲ್-ಖಾದಿಸ ಸಂಸ್ಥೆಯ ಮುಖ್ಯಸ್ಥರಾದ ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೆಸಿಎಫ್ ರಾಷ್ಟ್ರೀಯ ನಾಯಕ ಆಸಿಫ್ ಗೂಡಿನಬಳಿ ಉದ್ಘಾಟಿಸಿದರು. ಮಜ್ಲಿಸ್ ಗಾಣೆಮಾರ್ ಮುದರ್ರಿಸ್ ಸಯ್ಯಿದ್ ತ್ವಾಹ ತಂಙಳ್ ನಅತೇ ಶರೀಫ್ ಹಾಗೂ ದುಆ ನೆರವೇರಿಸಿದರು. ಉದ್ಯಮಿ ನಝೀರ್ ಪಡುಬಿದ್ರಿ ಅಲ್-ಖಾದಿಸ ಸಂಸ್ಥೆಯ ಉದ್ದೇಶಗಳ ಬಗ್ಗೆ ವಿವರಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಝಕರಿಯ್ಯಾ ಜೋಕಟ್ಟೆ, ಶಹೀರ್ ಅಬ್ಬಾಸ್ ಮೊದಲಾದವರು ಭಾಗವಹಿಸಿದ್ದರು.
ಕೆಸಿಎಫ್ ಅಂತರಾಷ್ಟ್ರೀಯ ನಾಯಕ ಕಮರುದ್ದೀನ್ ಗೂಡಿನಬಳಿ ಸ್ವಾಗತಿಸಿ, ಸಿರಾಜ್ ಬಾರ್ಕೂರು ವಂದಿಸಿದರು. ಝೈನ್ ಪಡುಬಿದ್ರಿ ಕಿರಾಅತ್ ಪಠಿಸಿದರು. ಇಕ್ಬಾಲ್ ಮಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಸುಮಾರು 2000ಕ್ಕೂ ಅಧಿಕ ಮಂದಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು. ಜುಬೈಲ್ ಪರಿಸರದ ಎಲ್ಲಾ ಸಂಘ-ಸಂಸ್ಥೆಗಳ ನಾಯಕರು ಹಾಗೂ ಕಾರ್ಯಕರ್ತರು ಸ್ವಯಂ ಸೇವಕರಾಗಿ ಸಹಕರಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು