ಕನ್ನಡದ ನೆಲದಲ್ಲಿ ಧಾರ್ಮಿಕ ಸೇವಾ ರಂಗದಲ್ಲಿ
ಅತ್ಯಪೂರ್ವ ಸಾಧನೆಗೈದವರಿಗಾಗಿ ಮೈಮನ್ ಅಕಾಡೆಮಿ ಹಾಗೂ ವಿಸ್ಡಮ್ ವರ್ಲ್ಡ್ ಪ್ರೀ ಸ್ಕೂಲ್ ನೆಟ್ವರ್ಕ್ ಕರ್ನಾಟಕ ನೀಡುತ್ತಿರುವ ಹೋಲಿ ಖುರ್ಆನ್ ಪುರಸ್ಕಾರಕ್ಕೆ ತೋಕೆ ಸಖಾಫಿ ಉಸ್ತಾದ್ ಆಯ್ಕೆಯಾಗಿದ್ದಾರೆ.
ಖುರ್ಆನ್ನ ಮೊದಲ ಕಾಂಡದ ವ್ಯಾಖ್ಯಾನ ಸಹಿತ ಸುನ್ನೀ ಕರ್ನಾಟಕಕ್ಕೆ ಇವರು ನೀಡಿದ ಅನನ್ಯ ಸಾಹಿತ್ಯ ಸೇವೆ ಹಾಗೂ ಇಸ್ಲಾಮೀ ಜ್ಞಾನ ದೀವಿಗೆಯ ವಿವಿಧ ಮಜಲುಗಳಲ್ಲಿ ಆಳ ಅಧ್ಯಯನ, ವಿಶೇಷವಾಗಿ ಇಸ್ಲಾಮಿಕ್ ತತ್ವ ಮತ್ತು ಕರ್ಮ ಶಾಸ್ತ್ರದಲ್ಲಿ ವಿಶಿಷ್ಟ ಸಾಧನೆಯನ್ನು
ಪರಿಗಣಿಸಿ ಈ ಆಯ್ಕೆ ನಡೆದಿದೆ.
ಎಪ್ರಿಲ್ 8 ರಂದು ಮಂಗಳೂರು ‘ಟೌನ್ ಹಾಲ್’ ನಲ್ಲಿ ನಡೆಯುವ ಮೈಮನ್ ಅಕಾಡೆಮಿ ಹಾಗೂ ವಿಸ್ಡಮ್ ವರ್ಲ್ಡ್ ಪ್ರೀ ಸ್ಕೂಲ್ ನೆಟ್ವರ್ಕ್ ಕರ್ನಾಟಕ ಇದರ 7 ನೇ ವಾರ್ಷಿಕ ಹಾಗೂ ಐದನೇ ಗ್ರಾಜ್ಯುವೇಶನ್ ಪ್ರೋಗ್ರಾಂ ಪ್ರಯುಕ್ತ ಹಮ್ಮಿಕೊಳ್ಳಲಾದ ಸಯ್ಯಿದತ್ ನಫೀಸತುಲ್ ಮಿಸ್ರಿಯಾ ಕೊಮೆಮೊರೇಶನ್ ಕಾನ್ಫರೆನ್ಸ್ ನಲ್ಲಿ ಈ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು.
ಚೆಯರ್ಮಾನ್ ಸಯ್ಯಿದ್ ಶರಫುದ್ದೀನ್ ತಂಙಳ್ ಫರೀದ್ ನಗರ ನೇತೃತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ
ಮೋಹಕ ವಾಗ್ಝರಣಿಯ ಅನುಗ್ರಹೀತ ಉಪನ್ಯಾಸಕ ಅನಸ್ ಅಮಾನಿ ಪುಷ್ಪಗಿರಿ, ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಎಚ್.ಐ ಅಬೂ ಸುಫ್ಯಾನ್ ಮದನಿ, ಕರ್ನಾಟಕ ವಕ್ಪ್ ಬೋರ್ಡ್ ಇದರ ನಿಕಟಪೂರ್ವ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಭಾಗವಹಿಸಲಿದ್ದಾರೆಂದು ಮ್ಯಾನೇಜಿಂಗ್ ಡೈರೆಕ್ಟರ್: ಎಂ.ಎ ಸಿದ್ದೀಕ್ ಮದನಿ ಮೆದು ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ