ಮುಂಬೈ: ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಇದೇ ಮೊದಲ ಬಾರಿಗೆ ನಾಗಪುರದ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದಾರೆ. ಗುಡಿ ಪಾಡ್ವಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಗ್ಪುರದ ಸ್ಮೃತಿ ಮಂದಿರವನ್ನು ತಲುಪಿ ಆರ್ಎಸ್ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡ್ಗೇವಾರ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಈ ಭೇಟಿ ಕುರಿತಾಗಿ ಶಿವ ಸೇನೆ ನಾಯಕ ಸಂಜಯ್ ರಾವತ್ ಅವರು ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಸೆಪ್ಟೆಂಬರ್ ನಲ್ಲಿ ಪ್ರಧಾನಿ ಮೋದಿಯವರು ನಿವೃತ್ತಿಯನ್ನು ಘೋಷಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ಅವರು ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಸಂಜಯ್ ರಾವತ್ ಹೇಳಿರುವುದು ಇದೀಗ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಮೋದಿ ಕಳೆದ 10-11 ವರ್ಷಗಳಲ್ಲಿ ಆರ್ಎಸ್ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿಲ್ಲ. ಆದರೆ ಈಗ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ‘ಟಾಟಾ, ಬೈ, ಬೈ’ ಹೇಳಲು ಹಾಗೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಉತ್ತರಾಧಿಕಾರಿಯನ್ನು ಆರ್ಎಸ್ಎಸ್ ನಿರ್ಧರಿಸುತ್ತದೆ ಎಂದು ಸಂಜಯ್ ರಾವತ್ ಹೇಳಿಕೊಂಡಿದ್ದಾರೆ,
ಅಲ್ಲದೆ ‘ನಾನು ಅರ್ಥಮಾಡಿಕೊಂಡಂತೆ ಇಡೀ ಸಂಘ ಪರಿವಾರವು ದೇಶದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತದೆ. ಪ್ರಧಾನಿ ಮೋದಿಯವರ ಸಮಯ ಮುಗಿದಿದೆ. ಆರ್ ಎಸ್ ಎಸ್ ನವರು ಬದಲಾವಣೆ ಬಯಸುತ್ತಾರೆ. ಅವರು ಮುಂದಿನ ಬಿಜೆಪಿ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಯಸುತ್ತಾರೆ’ ಎಂದು ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾವತ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ