ರಿಯಾದ್: ಸೌದಿ ಅರೇಬಿಯಾ ಹಜ್ ಯಾತ್ರೆಗೆ ಮುಂಚಿತವಾಗಿ ಪ್ರತೀ ವರ್ಷದಂತೆ ವ್ಯಾಪಾರ ಮತ್ತು ಕೌಟುಂಬಿಕ ಸಂದರ್ಶಕ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹಜ್ ಯಾತ್ರೆ ಹಿನ್ನೆಲೆ ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಆದರೆ ಈ ವರದಿಯ ಸತ್ಯಾಂಶವನ್ನು ತಿಳಿಯದ ಅಥವಾ ತಿಳಿದೂ ತಿಳಿಯದವರಂತೆ ನಟಿಸಿ, ಹೇಗಾದರೂ ಮುಸ್ಲಿಮರ ಮನ ನೋಯಿಸಬೇಕೆಂಬ ಪಣ ತೊಟ್ಟಿರುವ ಕೆಲವು ಮತಾಂಧ ಪತ್ರಿಕೆಗಳು ‘ಭಾರತೀಯ ಮುಸ್ಲಿಮರಿಗೆ ಹಜ್ ಯಾತ್ರೆ ನಿಷೇಧಿಸಿದ ಸೌದಿ ಅರೇಬಿಯಾ’ ಎಂಬ ತಲೆಬರಹವನ್ನು ನೀಡಿ ವಿಕೃತ ಆನಂದಿಸುತ್ತಿರುವುದು ಬೆಳಕಿಗೆ ಬಂದಿದೆ. ಇವರ ವರದಿಯನ್ನು ಮುಸಲ್ಮಾನರು ಮೂಸಿಯೂ ನೋಡುವುದಿಲ್ಲವಾದರೂ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಲೆ ಬರಹವನ್ನು ನೋಡಿ ಸಂದೇಹಕ್ಕೆ ಒಳಗಾಗುವುದರಲ್ಲಿ ಸಂಶಯವಿಲ್ಲ.
ಸೌದಿ ಅರೇಬಿಯಾದಲ್ಲಿ ಹಜ್ ಋತುವಿನ ಸಮಯದಲ್ಲಿ ಸಂದರ್ಶಕ ವೀಸಾ ನಿಯಂತ್ರಣ ಏರ್ಪಡಿಸುತ್ತಿರುವುದು ವಾಡಿಕೆಯಾಗಿದೆ. ಇದರ ಪ್ರಕಾರ ಹಜ್ ಯಾತ್ರೆಯು ಮುಕ್ತಾಯಗೊಳ್ಳುವವರೆಗೆ ಅಂದರೆ ಜೂನ್ ಮಧ್ಯದವರೆಗೆ ಉಮ್ರಾ, ವಿಸಿಟ್ ವೀಸಾ ನಿಷೇಧವು ಜಾರಿಯಲ್ಲಿರಲಿದೆ. ನೋಂದಣಿ ಇಲ್ಲದ ವ್ಯಕ್ತಿಗಳು ಹಜ್ ನಿರ್ವಹಿಸಲು ಪ್ರಯತ್ನಿಸುವುದನ್ನು ತಡೆಯಲು, ಜನಸಂದಣಿಯನ್ನು ನಿಯಂತ್ರಿಸಲು, ಹಜ್ ವೇಳೆ ಕಾಲ್ತುಳಿತದಂತಹ ಘಟನೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗುತ್ತದೆ.
ಈ ವೇಳೆಯಲ್ಲಿ ಹಜ್ ಯಾತ್ರಿಕರಿಗಾಗಿ ವಿಶೇಷ ಹಜ್ ವೀಸಾವನ್ನು ನೀಡಲಾಗುತ್ತದೆ. ಪರಿಷ್ಕೃತ ನಿಯಮಗಳ ಪ್ರಕಾರ ಈ ವರ್ಷ ಉಮ್ರಾ ವೀಸಾಕ್ಕೆ ಅರ್ಜಿ ಸಲ್ಲಿಸಲು ಎಪ್ರಿಲ್ 13. 2025 ಕೊನೆಯ ದಿನವಾಗಿದೆ. ಆ ಬಳಿಕ ಹಜ್ ಮುಕ್ತಾಯದವರೆಗೆ ಯಾವುದೇ ಹೊಸ ಉಮ್ರಾ ವೀಸಾಗಳನ್ನು ನೀಡಲಾಗುವುದಿಲ್ಲ.
ಮುಸ್ಲಿಮ್ ಬಾಹುಳ್ಯ ದೇಶಗಳಾದ ಭಾರತ, ಬಾಂಗ್ಲಾದೇಶ. ಪಾಕಿಸ್ತಾನ, ಈಜಿಪ್ಟ್ ಇಂಡೋನೇಷ್ಯಾ ಇರಾಕ್, ನೈಜೀರಿಯಾ, ಜೋರ್ಡಾನ್, ಅಲ್ಜೀರಿಯಾ, ಸುಡಾನ್, ಇಥಿಯೋಪಿಯಾ, ಟುನೀಶಿಯಾ, ಯೆಮೆನ್ ಮೊದಲಾದ 14 ದೇಶಗಳಿಗೆ ತಾತ್ಕಾಲಿಕವಾಗಿ ಉಮ್ರಾ, ವಿಸಿಟ್ ವೀಸಾ ನಿಷೇಧವನ್ನು ಹೇರಲಾಗಿದೆ. ಈ ದೇಶದವರು ಆಯಾ ದೇಶಕ್ಕೆ ನೀಡಲಾದ ಹಜ್ ಕೋಟಾದಡಿ ಹಜ್ ಯಾತ್ರೆ ಕೈಗೊಳ್ಳಲು ಯಾವುದೇ ನಿಷೇಧವಿಲ್ಲ.
ಇತರ ವೀಸಾ ಮೂಲಕ ಆಗಮಿಸಿ, ಹಜ್ ಸಮಯದಲ್ಲಿ ಸೌದಿಯಲ್ಲಿ ಅಕ್ರಮವಾಗಿ ವಾಸವಿದ್ದರೆ ಅಂತಹ ವ್ಯಕ್ತಿಗಳಿಗೆ ಸೌದಿ ಅರೇಬಿಯಾ ಪ್ರವೇಶಕ್ಕೆ ಐದು ವರ್ಷಗಳ ನಿಷೇಧ ಮತ್ತು SAR 10.000 ರೂ (2.28.547ರೂ.) ದಂಡವನ್ನು ವಿಧಿಸಲಾಗುತ್ತದೆ ಎಂದು Gulf News ವರದಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ