ಮಂಗಳೂರು,ಏ.11: ಕೇಂದ್ರ ಸರಕಾರ ಜಾರಿಗೆ ತಂದಿರುವ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಏ.18 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.
ಕರ್ನಾಟಕ ಉಲಮಾ ಕೋಆರ್ಡಿನೇಷನ್ ವತಿಯಿಂದ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ಮತ್ತು ಖಾಝಿ ಶೈಖುನಾ ಮಾಣಿ ಉಸ್ತಾದ್ ಇವರ ನೇತೃತ್ವದಲ್ಲಿ ಏ.18 ರಂದು ಶುಕ್ರವಾರ ಅಪರಾಹ್ನ 3 ಗಂಟೆಗೆ ಮಂಗಳೂರಿನ ಹೊರವಲಯದ ಅಡ್ಯಾರ್ ಕಣ್ಣೂರು ಶಾ ಗಾರ್ಡನ್ ನಲ್ಲಿ ಐತಿಹಾಸಿಕ ಹೋರಾಟ ನಡೆಯಲಿದೆ.
ಈ ಬಗ್ಗೆ ಜಾಗೃತಿ ಮೂಡಿಸುವಂತೆ ಎಲ್ಲಾ ಮೊಹಲ್ಲಾಗಳಿಗೆ ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಶೀಘ್ರದಲ್ಲೇ ಕರ್ನಾಟಕ ಉಲಮಾ ಕೋಆರ್ಡಿನೇಷನ್ ಸಮಿತಿಯು ಪತ್ರಿಕಾಗೋಷ್ಠಿ ನಡೆಸಿ ಬೃಹತ್ ಪ್ರತಿಭಟನೆಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ.
2020ರ ಆರಂಭದಲ್ಲಿ ಕೇಂದ್ರ ಸರ್ಕಾರದ ಸಿಎಎ ಕಾಯ್ದೆ ಮತ್ತು ಎನ್ ಆರ್ ಸಿ ವಿರೋಧಿಸಿ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಬೃಹತ್ ಹೋರಾಟ ನಡೆದಿತ್ತು. ಅಂದಿನ ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಅಧಿಕ ಜನರು ಸೇರಿದ್ದರು. ಈಗ ಅದೇ ಶಾ ಗಾರ್ಡನ್ ಮೈದಾನವು ಎನ್ ಆರ್ ಸಿ ಹೋರಾಟವನ್ನೂ ಮೀರಿಸುವ ದೊಡ್ಡ ಮಟ್ಟದ ಮತ್ತೊಂದು ಹೋರಾಟಕ್ಕೆ ಸಾಕ್ಷಿಯಾಗಲಿದೆ.
ಏಪ್ರಿಲ್ 18ರ ಪ್ರತಿಭಟನೆಯಲ್ಲಿ ಹಲವಾರು ಪ್ರಮುಖರು ಭಾಗವಹಿಸಲಿದ್ದಾರೆ. ಏಪ್ರಿಲ್ 12 ಶನಿವಾರದಂದು ಪತ್ರಿಕಾಗೋಷ್ಠಿ ನಡೆಸಲು ಕರ್ನಾಟಕ ಉಲಮಾ ಕೋಆರ್ಡಿನೇಷನ್ ತೀರ್ಮಾನಿಸಿದೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ