ಮಂಗಳೂರು,ಏ.12: ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕರ್ನಾಟಕ ಉಲಮಾ ಕೋಆರ್ಡಿನೇಷನ್ ವತಿಯಿಂದ ಎ.18ರ ಅಪರಾಹ್ನ 3 ಗಂಟೆಗೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರ್ ಶಾ ಗಾರ್ಡನ್ನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷರಾದ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಹೇಳಿದ್ದಾರೆ.
ನಗರದ ಖಾಸಗಿ ಹೊಟೇಲಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಸ್ಲಿಮರನ್ನು ದಮನಿಸುವ ಉದ್ದೇಶದಿಂದ ಕೇಂದ್ರ ಸರಕಾರ ಈ ಕಾಯ್ದೆಯನ್ನು ಜಾರಿಗೊಳಿಸಿದೆ. ಇದರ ವಿರುದ್ಧ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಅದಕ್ಕೆ ಪೂರಕವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಿ ನಮ್ಮ ಅಸಮಾಧಾನ ವ್ಯಕ್ತಪಡಿಸಲಾಗುತ್ತಿದೆ. ಈ ಪ್ರತಿಭಟನೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಲಕ್ಷಾಂತರ ಮಂದಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಉಲಮಾ ಕೋಆರ್ಡಿನೇಷನ್ ಮುಖಂಡರಾದ ಮೌಲಾನಾ ಶಾಫಿ ಸಅದಿ, ಮೌಲಾನ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಡಾ. ಎಂಎಸ್ಎಂ ಅಬ್ದುಲ್ ರಶೀದ್ ಝೈನಿ, ಉಸ್ಮಾನುಲ್ ಫೈಝಿ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ, ವಳವೂರು ಮುಹಮ್ಮದ್ ಸಅದಿ, ಕಡಬ ಫೈಝಿ. ಕುಕ್ಕಿಲ ದಾರಿಮಿ, ಅಶ್ರಫ್ ಕಿನಾರ ಮತ್ತಿತರರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?