ಕೋಝಿಕ್ಕೋಡ್ | ಈ ವರ್ಷ ಭಾರತದ ಖಾಸಗಿ ಹಜ್ ಗ್ರೂಪುಗಳ ಮೂಲಕ ಹಜ್ ಯಾತ್ರೆ ಕೈಗೊಳ್ಳಲು ಉದ್ದೇಶಿಸಿರುವವರ ಪ್ರಯಾಣದ ಬಗ್ಗೆ ನಡೆಯುತ್ತಿರುವ ಅನಿಶ್ಚಿತತೆಯ ನಡುವೆ, ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಮಧ್ಯಪ್ರವೇಶಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಕೋರಿದ್ದಾರೆ.
ನುಸುಕ್ ಪ್ಲಾಟ್ಫಾರ್ಮ್ ಮೂಲಕ ಚಟುವಟಿಕೆಗಳು ಪೂರ್ಣಗೊಳಿಸಲಾಗಿಲ್ಲ ಎಂಬ ಕಾರಣ ಕೋಟಾವನ್ನು ತಡೆಹಿಡಿಯಲಾಗಿದೆ. ನುಸುಕ್ ಪೋರ್ಟಲ್ ಅನ್ನು ಸಹ ಮುಚ್ಚಲಾಗಿದೆ. ಈ ಬಾರಿ 52,507 ಸೀಟುಗಳನ್ನು ಖಾಸಗಿ ಗುಂಪುಗಳಿಗೆ ಹಂಚಿಕೆ ಮಾಡಲಾಗಿತ್ತು.
ಸೌದಿ ಅರೇಬಿಯಾದಲ್ಲಿನ ತಮ್ಮ ಸೇವಾ ಪೂರೈಕೆದಾರರು, ವಸತಿ ಮತ್ತು ಸಾರಿಗೆ ಒಪ್ಪಂದದ ಪಾವತಿಗಳು ಒಳಗೊಂಡಂತೆ ಚಟುವಟಿಕೆಗಳನ್ನು ಕೆಲವು ಖಾಸಗಿ ಗ್ರೂಪುಗಳು ಪೂರ್ಣಗೊಳಿಸದ ಕಾರಣ ಸಂಪೂರ್ಣ ಕೋಟಾವನ್ನು ತಡೆಹಿಡಿಯಲಾಗುತ್ತಿರುವ ಪರಿಸ್ಥಿತಿ ಉಂಟಾಗಿದೆ. ಪ್ರತಿ ವರ್ಷ ಹಜ್ ಯಾತ್ರೆಯನ್ನು ದೋಷರಹಿತವಾಗಿ ಆಯೋಜಿಸುವ ಕೇಂದ್ರ ಸರ್ಕಾರವು, ಈ ಅನಿಶ್ಚಿತತೆಯನ್ನು ಕೊನೆಗೊಳಿಸಲು ಮತ್ತು ಪೂರ್ಣ ಖಾಸಗಿ ಕೋಟಾವನ್ನು ಪುನಃಸ್ಥಾಪಿಸಲು ರಾಜತಾಂತ್ರಿಕ ಮಧ್ಯಸ್ಥಿಕೆಯನ್ನು ಕೋರುವಂತೆ ಪತ್ರವು ಆಗ್ರಹಿಸಿದೆ.
ಯಾವುದೇ ಅಡೆತಡೆ ಅಥವಾ ಅನಿಶ್ಚಿತತೆಯಿಲ್ಲದೆ ಸುಗಮ ಯಾತ್ರೆಗೆ ಅನುಕೂಲವಾಗುವಂತೆ ಪ್ರಯಾಣ ವ್ಯವಸ್ಥೆಗಳನ್ನು ತ್ವರಿತಗೊಳಿಸಬೇಕು ಮತ್ತು ಯಾತ್ರೆಗೆ ಅಡ್ಡಿಯುಂಟಾದರೆ, ಅದು ಹಜ್ ನಿರ್ವಹಣಾ ವ್ಯವಸ್ಥೆಯಲ್ಲಿ ಯುಗಯುಗಗಳಿಂದ ಬಂದಿರುವ ನಮ್ಮ ದೇಶದ ಒಳ್ಳೆಯ ಹೆಸರಿಗೆ ಪರಿಣಾಮ ಬೀರಲಿದೆ ಎಂದು ಪತ್ರದಲ್ಲಿ ಪ್ರಧಾನಿಯವರ ಗಮನ ಸೆಳೆಯಲಾಗಿದೆ.
ಸಾವಿರಾರು ಕುಟುಂಬಗಳಿಗೆ ಆರ್ಥಿಕ ಮತ್ತು ಭಾವನಾತ್ಮಕ ನಷ್ಟವನ್ನುಂಟುಮಾಡುತ್ತಿರುವ ಈ ವಿಷಯದಲ್ಲಿ ಮುಂದಿನ ದಿನಗಳಲ್ಲಿ ಸೌದಿ ಅರೇಬಿಯಾಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಮಧ್ಯಪ್ರವೇಶಿಸುವಂತೆ ಹಾಗೂ ಭಾರತದಿಂದ ಹಜ್ ಯಾತ್ರೆಯನ್ನು ಹೆಚ್ಚು ವ್ಯವಸ್ಥಿತವಾಗಿಸಲು ವ್ಯವಸ್ಥೆ ಮಾಡಬೇಕೆಂದು ಪತ್ರದಲ್ಲಿ ವಿನಂತಿಸಲಾಗಿದೆ.
ಖಾಸಗಿ ಗ್ರೂಪುಗಳು ಈಗಾಗಲೇ ಪ್ರಯಾಣಕ್ಕೆ ಸಂಬಂಧಿಸಿದ ವಿವಿಧ ಮರುಪಾವತಿಸಲಾಗದ ವಹಿವಾಟುಗಳನ್ನು ಮಾಡಿರುವುದರಿಂದ ಇದು ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಹೇತುವಾಗಲಿದೆ. ಭಾರತವನ್ನು ‘ರೋಡ್ ಟು ಮಕ್ಕಾ’ ಯೋಜನೆಯಲ್ಲಿ ಸೇರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಗ್ರ್ಯಾಂಡ್ ಮುಫ್ತಿ ಈ ಹಿಂದೆ ಪ್ರಧಾನಿ ಮತ್ತು ಸೌದಿ ಸರ್ಕಾರಕ್ಕೆ ಪತ್ರ ಬರೆದಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ