janadhvani

Kannada Online News Paper

ಏ.18, ಉಲಮಾ ಕೋ ಆರ್ಡಿನೇಶನ್ ಹಮ್ಮಿಕೊಂಡ ಪ್ರತಿಭಟನೆ- ಯಶಸ್ಸಿಗೆ ಮುಸ್ಲಿಂ ಜಮಾಅತ್ ದ.ಕ ವೆಸ್ಟ್ ಜಿಲ್ಲೆ ಕರೆ

ಮಂಗಳೂರು: ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಸಂವಿಧಾನಿಕವಾಗಿ ಸಮುದಾಯವನ್ನು ಒಗ್ಗೂಡಿಸಿ ಹೋರಾಡಲು ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ವತಿಯಿಂದ ಏಪ್ರಿಲ್ 18, ಶುಕ್ರವಾರ ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.

ಜಿಲ್ಲಾಧ್ಯಕ್ಷ ಅಲೀ ಕುಂಞಿ ಹಾಜಿ ಪಾರೆ ಅಧ್ಯಕ್ಷತೆ ವಹಿಸಿದ ಕಣ್ಣೂರು ಸುನ್ನೀ ಸಂಟರಿನಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಮುಸಲ್ಮಾನರ ಕೋಟ್ಯಾಂತರ ವಕ್ಫ್ ಆಸ್ತಿಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರಕಾರ ಮುಸಲ್ಮಾನರನ್ನು ಕಬಳಿಸುವ ಹುನ್ನಾರವನ್ನು ಹೊಂದಿದೆ. ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರತಿಯೊಬ್ಬ ಭಾರತೀಯನು ತಿರಸ್ಕರಿಸಬೇಕಾಗಿದೆ , ಈ ಕುರಿತು ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ಕರೆ ನೀಡಿರುವ ಬೃಹತ್ ಪ್ರತಿಭಟನೆಯನ್ನು ದ.ಕ ಜಿಲ್ಲಾ ವ್ಯಾಪ್ತಿಯ ಪ್ರತಿಯೊಂದು ಯುನಿಟ್‌ಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಸದಸ್ಯರು ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮ್ ಸಅದಿ ಖತರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.