ಕೋಝಿಕ್ಕೋಡ್ | ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಭಾರತದ ಶಾಂತಿಯುತ ಜೀವನದ ವಿರುದ್ಧದ ಹೇಯ ಆಕ್ರಮಣವಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ. ಪ್ರಪಂಚದ ವಿವಿಧ ಭಾಗಗಳಿಂದ ಪ್ರವಾಸಿಗರು ಸೇರುವ ಸಮಯದಲ್ಲಿ ಈ ದಾಳಿಯನ್ನು ಆಯ್ಕೆ ಮಾಡಲಾಗಿದೆ. ಜನರೆಡೆಯಲ್ಲಿ ಭಯವನ್ನುಂಟು ಮಾಡಿ ಕಾಶ್ಮೀರಕ್ಕೆ ಜನರ ಹರಿವನ್ನು ನಿಲ್ಲಿಸುವುದು ಮತ್ತು ಶಾಂತಿಯುತ ವಾತಾವರಣವನ್ನು ಮುರಿದು ಕಾಶ್ಮೀರಿಗಳನ್ನು ತೊಂದರೆಗೀಡಾದ ಜೀವನಕ್ಕೆ ತಳ್ಳುವುದು ಈ ದಾಳಿಯ ಉದ್ದೇಶವಾಗಿದೆ.
ಭಯೋತ್ಪಾದನೆಯಿಂದ ಭಾರತವನ್ನು ಸೋಲಿಸಲು ಸಾಧ್ಯವಿಲ್ಲ. ಅಂತಹ ಹೀನ ಕೃತ್ಯಗಳ ಮುಂದೆ ದೇಶವು ತಲೆ ಬಾಗುವುದಿಲ್ಲ. ಅಪರಾಧಿಗಳನ್ನು ಬಂಧಿಸಿ ಶಿಕ್ಷೆಯನ್ನು ಖಾತ್ರಿಪಡಿಸುವುದರೊಂದಿಗೆ ಕಾಶ್ಮೀರಿಗಳ ಜೀವನವನ್ನು ಅವರ ಸಾಮಾನ್ಯ ಸ್ಥಿತಿಗೆ ಸುಲಭವಾಗಿ ಮರುಸ್ಥಾಪಿಸಲು ಪ್ರಯತ್ನಿಸಬೇಕು ಎಂದು ಕಾಂತಪುರಂ ಹೇಳಿದರು. ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ಗ್ರ್ಯಾಂಡ್ ಮುಫ್ತಿ ಸಂತಾಪ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ