ಮಂಗಳೂರು: ನಗರದ ಹೊರವಲಯದ ಕುಡುಪು ಸಮೀಪ ರವಿವಾರ ಸಂಜೆ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿರುವ ಪ್ರಕರಣ ತಿರುವು ಪಡೆದಿದ್ದು, ಮುಸ್ಲಿಂ ಎಂಬ ಕಾರಣಕ್ಕೆ ಯುವಕನನ್ನು ಗುಂಪು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.
ಮೃತ ಯುವಕ ಉತ್ತರ ಭಾರತ ಮೂಲದವನು ಎನ್ನಲಾಗಿದ್ದು, ಸುಮಾರು 35ರಿಂದ 40 ವರ್ಷ ಪ್ರಾಯದ ಈ ಯುವಕನನ್ನು 50 ಮಂದಿಯ ಗುಂಪು ಬ್ಯಾಟ್, ದೊಣ್ಣೆಯಿಂದ ಹಲ್ಲೆ ಮಾಡಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. 50 ಜನರ ಗುಂಪಿನಲ್ಲಿ ಮಾಜಿ ಕಾರ್ಪೊರೇಟರ್ ಒಬ್ಬರ ಪತಿಯೂ ಭಾಗಿಯಾಗಿದ್ದರು ಎಂಬ ಆರೋಪಗಳು ಕೇಳಿಬಂದಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಕಾಂಗ್ರೆಸ್ ಮತ್ತು ಸಿಪಿಎಂ ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಪಿಎಂ ದ.ಕ ಜಿಲ್ಲಾ ಮುಖಂಡ ಮುನೀರ್ ಕಾಟಿಪಳ್ಳ, ಮಂಗಳೂರು ಬಳಿಯ ಕುಡುಪು ಮೈದಾನದ ಸಮೀಪ ಬಂದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ.
ಮಾಜಿ ಕಾರ್ಪೊರೇಟರ್ ಓರ್ವರ ಪತಿ ಈ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಹತ್ಯೆಯ ತರುವಾಯ ಸ್ಥಳೀಯ ಜನಪ್ರತಿನಿಧಿಗಳೂ ಮಧ್ಯಪ್ರವೇಶಿಸಿ ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಕೆಲವರನ್ನು ಬಚಾವ್ ಮಾಡುವ ಯತ್ನ ನಡೆಸುತ್ತಿರುವ ಆರೋಪಗಳೂ ಕೇಳಿಬರುತ್ತಿದೆ. ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ ಎಂದು
ತಿಳಿಸಿದರು.
ವಲಸೆ ಕಾರ್ಮಿಕನ ಮೇಲೆ ಗುಂಪು ಹಲ್ಲೆ, ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಲು ಮುನೀರ್ ಕಾಟಿಪಳ್ಳ ಆಗ್ರಹಿಸಿದರು
ಈ ಬಗ್ಗೆ ಮಾತನಾಡಿರುವ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ, ಪೊಲೀಸರು ನಿಷ್ಪಕ್ಷಪಾತವಾಗಿ ಮತ್ತು ಗಂಭೀರವಾಗಿ ಈ ಪ್ರಕರಣವನ್ನು ಭೇದಿಸಬೇಕು, ವಿಶೇಷ ತನಿಖಾ ತಂಡವನ್ನು ರಚಿಸಿ ಅಮೂಲಾಗ್ರ ತನಿಖೆ ನಡೆಸಬೇಕು, ಸತ್ಯ ಹೊರಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿಯವರು ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಅಪಾದಿಸಿದರು.
ಘಟನೆ ಬಗ್ಗೆ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಗುರುತು ಪತ್ತೆಗಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಪ್ರಾಥಮಿಕ ವರದಿಯ ಬಳಿಕ ಸಾವಿಗೆ ಕಾರಣ ಏನು ಎಂದು ತಿಳಿಯಬಹುದಾಗಿದೆ. ಈ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದಿರಿ ಎಂದು ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ