ಮದೀನಾ ಮುನವ್ವರ: ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಭಾರತದಿಂದ ಬಂದ ಹಜ್ಜಜಾಜಿಗಳ ಮೊದಲ ಎರಡು ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ನ್ಯಾಷನಲ್ ಏರ್ಪೋರ್ಟ್ ತಲುಪಿದೆ.ಇಂದು ಭಾರತದ ಹೈದರಾಬಾದ್ ಹಾಗೂ ಲಕ್ನೋ ದಿಂದ 578 ಹಾಜಿಗಳು ಆಗಮಿಸಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ನ ಹಜ್ಜ್ ವಾಲೇಂಟಿಯರ್ ಕೋರ್ ನ ಸದಸ್ಯರು ಹಜ್ಜಾಜಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡರು.



ಇಂಡಿಯನ್ ಅಂಬಾಸಿಡರ್ ಡಾ ಸುಹೇಲ್ ಅಜಾಝ್ ಖಾನ್, ಇಂಡಿಯನ್ ಕೌನ್ಸಿಲ್ ಜನರಲ್(ಜಿದ್ದಾ) ಫಹದ್ ಅಹ್ಮದ್ ಖಾನ್ ಸುರಿ ಸೇರಿದಂತೆ ಇಂಡಿಯನ್ ಎಂಬಸಿಯ ವಿವಿಧ ಅಧಿಕಾರಿಗಳು ಹಜ್ಜಾಜಿಗಳನ್ನು ಸ್ವಾಗತಿಸಿದರು. ಕೆಸಿಎಫ್ ಹೆಚ್.ವಿ.ಸಿ ಸದಸ್ಯರು ಹಜ್ಜಾಜಿಗಳನ್ನು ಮದೀನಾ ವಿಮಾನ ನಿಲ್ದಾಣ ಹಾಗೂ ಅವರು ತಂಗುವ ಹೋಟೆಲ್ ಗೆ ತೆರಳಿ ಸಹಕರಿಸಿದರು. ಹಾಜಿಗಳಿಗೆ ಹೆಚ್.ವಿ.ಸಿ ವೆಲ್ಕಂ ಕಿಟ್, ಖರ್ಜೂರ ನೀಡಿ ಸತ್ಕರಿಸಿದರು.



ಈ ವೇಳೆ ಮದೀನಾ ಮುನವ್ವರದ ಸಾಂಪ್ರದಾಯಿಕ ಶೈಲಿಯಲ್ಲಿ ಝಂಝಂ ವಿತರಿಸಲಾಯಿತು ಹಾಗೂ ಹಜ್ಜಾಜಿಗಳ ಮೇಲೆ ಹೂವಿನ ಎಸಲುಗಳನ್ನು ಸುರಿಸುವ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು. ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಕೆ.ಸಿಎ.ಫ್ ಹೆಚ್.ವಿ.ಸಿ ಕಾರ್ಯಕರ್ತರು ಹೋಟೆಲ್ ತಲುಪಿಸಿದರು. ಇಂದು ರಾತ್ರಿ7.30 ವೇಳೆಗೆ ಮುಂಬೈಯಿಂದ 442ಹಾಜಿಗಳು ಆಗಮಿಸಲಿದ್ದಾರೆ.ರಾಜ್ಯದ 956 ಹಜ್ಜಾಜಿಗಳು ನಾಳೆ ಪವಿತ್ರ ನಗರವಾದ ಮದೀನಾ ಮುನವ್ವರ ತಲುಪಲಿದ್ದು, 378 ಹಾಜಿಗಳು ನಾಳೆ ಬೆಳಗ್ಗಿನ ವೇಳೆ, 289 ಹಾಜಿಗಳು ಮಧ್ಯಾಹ್ನ ವೇಳೆ, ಹಾಗೂ ಸಂಜೆ 289ಹಾಜಿಗಳು ಮದೀನಾ ಮುನವ್ವರ ತಲುಪಲಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ವಾಲೆಂಟಿಯರ್ ಕೋರ್ ಸದಸ್ಯರು ಮಕ್ಕತುಲ್ ಮುಕರ್ರಮ ಹಾಗೂ ಮದೀನಾ ಮುನವ್ವರದಲ್ಲಿ ಹಜ್ಜಾಜಿಗಳಿಗೆ ಸಹಕರಿಸಲು ಸನ್ನಧ್ಧರಾಗಿದ್ದಾರೆ.
ವರದಿ : ಹಕೀಂ ಬೋಳಾರ್
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು