ಮಂಗಳೂರು: ಇಲ್ಲಿನ ಹೊರವಲಯದ ಕುಡುಪು ಪ್ರದೇಶದಲ್ಲಿ ಓರ್ವ ವ್ಯಕ್ತಿಯನ್ನು ಮುಸ್ಲಿಮ್ ಎಂಬ ಕಾರಣಕ್ಕಾಗಿ ದುಷ್ಕರ್ಮಿಗಳ ಗುಂಪು ಹತ್ಯೆಗೈದಿದ್ದು, ಪೊಲೀಸು ಇಲಾಖೆ ಕಾರ್ಯಾಚರಣೆ ನಡೆಸಿ ಹಲವರನ್ನು ಬಂಧಿಸಿದೆ. ಗೃಹ ಸಚಿವರು ಈ ಬಗ್ಗೆ ಮಾದ್ಯಮ ಹೇಳಿಕೆ ನೀಡಿ, ಹತ್ಯೆಗೆ ‘ ಕಾರಣ’ ವನ್ನು ಹೇಳಿ, ಹತನಾದ ವ್ಯಕ್ತಿ ಪಾಕಿಸ್ತಾನ ಝಿಂದಾಬಾದ್ ಕೂಗಿದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಗೃಹ ಸಚಿವರ ಪ್ರಸ್ತುತ ಹೇಳಿಕೆಯು, ಸಂಬಂಧಿತ ಘಟನೆಯನ್ನು ಸರಿದೂಗಿಸುವ ಪ್ರಯತ್ನದಲ್ಲಿ ಹೇಳಿದಂತಿದೆ.
ಈ ರೀತಿಯ ಹೇಳಿಕೆ ಸ್ವೀಕಾರಾರ್ಹವಾಗಲಾರದು. ಇಂತಹ ಹೇಳಿಕೆಗಳು ಜನರು ಕಾನೂನನ್ನು ಕೈಗೆತ್ತಿಕೊಳ್ಳಲು ಪ್ರೋತ್ಸಾಹ ನೀಡಿದಂತಿದೆ. ಗೃಹ ಸಚಿವರು ಸರಕಾರದ ಭಾಗವಾಗಿ ಅಪರಾಧ ತಡೆಯುವ ನಿಟ್ಟಿನ ಹೇಳಿಕೆ ನೀಡಬೇಕಿತ್ತು, ಹೊರತು ಘಟನೆಯನ್ನು ಸರಿದೂಗಿಸುವ ಹೇಳಿಕೆ ನೀಡಿ ಯಾವುದೂ ಒಂದು ವಿಭಾಗವನ್ನು ತೃಪ್ತಿಪಡಿಸುವ ರೀತಿಯಲ್ಲಿರುವುದು ಖೇದಕರ.
ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ತಡೆಯುವ ಹೇಳಿಕೆಯನ್ನು ಜನರು ಗೃಹ ಸಚಿವರಿಂದ ನಿರೀಕ್ಷಿಸುತ್ತಿದ್ದಾರೆ. ಕರ್ನಾಟಕದ ಕಲಬುರ್ಗಿಯಲ್ಲಿ ಇತ್ತೀಚೆಗೆ ಇತರ ದೇಶದ ಧ್ವಜ ಹಾರಿಸಿದ ಕೃತ್ಯದಾರರ ಹಿನ್ನೆಲೆ ಜನರ ಮನಸ್ಸಿನಿಂದ ಮರೆಯಾಗುವ ಮೊದಲೇ ಗೃಹ ಸಚಿವರು ಘಟನೆಯನ್ನು ಸರಿದೂಗಿಸುವ ಹೇಳಿಕೆ ನೀಡಿರುವುದು ಸ್ವೀಕಾರಾರ್ಹವಲ್ಲ. ಗೃಹ ಸಚವರ ಸಮಗ್ರ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ ಎಂದು ಕೆ.ಅಶ್ರಫ್ ( ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ