ಮಂಗಳೂರು: ಇಲ್ಲಿನ ಹೊರವಲಯದ ಕುಡುಪು ಪ್ರದೇಶದಲ್ಲಿ ಓರ್ವ ವ್ಯಕ್ತಿಯನ್ನು ಮುಸ್ಲಿಮ್ ಎಂಬ ಕಾರಣಕ್ಕಾಗಿ ದುಷ್ಕರ್ಮಿಗಳ ಗುಂಪು ಹತ್ಯೆಗೈದಿದ್ದು, ಪೊಲೀಸು ಇಲಾಖೆ ಕಾರ್ಯಾಚರಣೆ ನಡೆಸಿ ಹಲವರನ್ನು ಬಂಧಿಸಿದೆ. ಗೃಹ ಸಚಿವರು ಈ ಬಗ್ಗೆ ಮಾದ್ಯಮ ಹೇಳಿಕೆ ನೀಡಿ, ಹತ್ಯೆಗೆ ‘ ಕಾರಣ’ ವನ್ನು ಹೇಳಿ, ಹತನಾದ ವ್ಯಕ್ತಿ ಪಾಕಿಸ್ತಾನ ಝಿಂದಾಬಾದ್ ಕೂಗಿದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಗೃಹ ಸಚಿವರ ಪ್ರಸ್ತುತ ಹೇಳಿಕೆಯು, ಸಂಬಂಧಿತ ಘಟನೆಯನ್ನು ಸರಿದೂಗಿಸುವ ಪ್ರಯತ್ನದಲ್ಲಿ ಹೇಳಿದಂತಿದೆ.
ಈ ರೀತಿಯ ಹೇಳಿಕೆ ಸ್ವೀಕಾರಾರ್ಹವಾಗಲಾರದು. ಇಂತಹ ಹೇಳಿಕೆಗಳು ಜನರು ಕಾನೂನನ್ನು ಕೈಗೆತ್ತಿಕೊಳ್ಳಲು ಪ್ರೋತ್ಸಾಹ ನೀಡಿದಂತಿದೆ. ಗೃಹ ಸಚಿವರು ಸರಕಾರದ ಭಾಗವಾಗಿ ಅಪರಾಧ ತಡೆಯುವ ನಿಟ್ಟಿನ ಹೇಳಿಕೆ ನೀಡಬೇಕಿತ್ತು, ಹೊರತು ಘಟನೆಯನ್ನು ಸರಿದೂಗಿಸುವ ಹೇಳಿಕೆ ನೀಡಿ ಯಾವುದೂ ಒಂದು ವಿಭಾಗವನ್ನು ತೃಪ್ತಿಪಡಿಸುವ ರೀತಿಯಲ್ಲಿರುವುದು ಖೇದಕರ.
ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ತಡೆಯುವ ಹೇಳಿಕೆಯನ್ನು ಜನರು ಗೃಹ ಸಚಿವರಿಂದ ನಿರೀಕ್ಷಿಸುತ್ತಿದ್ದಾರೆ. ಕರ್ನಾಟಕದ ಕಲಬುರ್ಗಿಯಲ್ಲಿ ಇತ್ತೀಚೆಗೆ ಇತರ ದೇಶದ ಧ್ವಜ ಹಾರಿಸಿದ ಕೃತ್ಯದಾರರ ಹಿನ್ನೆಲೆ ಜನರ ಮನಸ್ಸಿನಿಂದ ಮರೆಯಾಗುವ ಮೊದಲೇ ಗೃಹ ಸಚಿವರು ಘಟನೆಯನ್ನು ಸರಿದೂಗಿಸುವ ಹೇಳಿಕೆ ನೀಡಿರುವುದು ಸ್ವೀಕಾರಾರ್ಹವಲ್ಲ. ಗೃಹ ಸಚವರ ಸಮಗ್ರ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ ಎಂದು ಕೆ.ಅಶ್ರಫ್ ( ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ