ಮದೀನಾ ಮುನವ್ವರ: ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಕರ್ನಾಟಕದಿಂದ ಬಂದ ಹಜ್ಜಾಜಿಗಳ ಮೊದಲ ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ನ್ಯಾಷನಲ್ ಏರ್ಪೋರ್ಟ್ ತಲುಪಿದೆ. ಬೆಳಗ್ಗಿನ ಜಾವ 378 ಹಾಜಿಗಳು ಆಗಮಿಸಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಹಜ್ಜ್ ವಾಲೇಂಟಿಯರ್ ಕೋರ್ (HVC) ಸದಸ್ಯರು ಹಜ್ಜಾಜಿಗಳನ್ನು ಬರಮಾಡಿಕೊಂಡರು. ಹಜ್ಜಾಜಿಗಳು ತಂಗುವ ಹೋಟೆಲ್ ಗೆ ತೆರಳಿ ನೀರು ಹಾಗೂ ಲಘು ಉಪಹಾರ ನೀಡುವ ಮೂಲಕ ಸ್ವಾಗತಿಸಿದರು.



ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಹೋಟೆಲ್ ಗೆ ತಲುಪಿಸಿದ್ದು, ಅಗತ್ಯವಿರುವ ಹಾಜಿಗಳಿಗೆ ಸಿಮ್ ಕಾರ್ಡ್ ಪಡೆಯಲು ಸಹಕರಿಸಿದರು.
ರಾಜ್ಯದಿಂದ 956 ಹಜ್ಜಾಜಿಗಳು ಇಂದು ಮದೀನಾ ಮುನವ್ವರ ತಲುಪಲಿದ್ದು, 289 ಹಾಜಿಗಳು ಮಧ್ಯಾಹ್ನ ವೇಳೆ, ಹಾಗೂ ಸಂಜೆ 289 ಹಾಜಿಗಳು ಪವಿತ್ರ ನಗರ ತಲುಪಲಿದ್ದಾರೆ. ಕರ್ನಾಟಕದಿಂದ ಆಗಮಿಸುತ್ತಿರುವ ಹಜ್ಜಾಜಿಗಳ ಎಲ್ಲಾ ಅಗತ್ಯಗಳಿಗೆ ಸ್ಪಂದಿಸಲು ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಹಜ್ಜ್ ವಾಲೆಂಟಿಯರ್ ಕೋರ್ ಸದಸ್ಯರು ತಯಾರಾಗಿದ್ದು, ದಿನದ 24 ಗಂಟೆಗಳ ಕಾಲ ಅಗತ್ಯ ಸೇವೆಗಳಿಗೆ ಕಾರ್ಯನಿರತರಾಗಿರುತ್ತಾರೆ.
ವರದಿ : ಹಕೀಂ ಬೋಳಾರ್
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು