ಜೆರುಸಲೇಂ, ಮೇ 1: ಜೆರುಸಲೆಮ್ ಹೊರವಲಯದಲ್ಲಿ ಬುಧವಾರ ಭಾರಿ ಕಾಡ್ಗಿಚ್ಚುಗಳು ಉಂಟಾಗಿದ್ದು, ಇಸ್ರೇಲ್ ಅಧಿಕಾರಿಗಳು ಕೇವಲ 24 ಗಂಟೆಗಳಲ್ಲಿ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಿದ್ದಾರೆ. ಹಲವಾರು ಮಂದಿ ಗಂಭೀರಾಗಿ ಗಾಯಗೊಂಡಿದ್ದಾರೆ. ಸುತ್ತಮುತ್ತಲಿನ ಬೆಟ್ಟಗಳ ತುದಿಯಲ್ಲಿ ಹಾಗೂ ಹೆದ್ದಾರಿಗಳ ಮೇಲೆ ದಟ್ಟವಾದ ಹೊಗೆಯ ಆವರಿಸಿಕೊಂಡಿದೆ.
ಅನೇಕ ಮಂದಿ ತಮ್ಮ ವಾಹನಗಳನ್ನು ಬಿಟ್ಟು ಜ್ವಾಲೆಯಿಂದ ತಪ್ಪಿಸಿ ಓಡಿಹೋಗುತ್ತಿರುವುದು ಕಂಡುಬಂದಿದೆ. 160 ಕ್ಕೂ ಹೆಚ್ಚು ರಕ್ಷಣಾ ಮತ್ತು ಅಗ್ನಿಶಾಮಕ ದಳಗಳು ಕಾಡಿಚ್ಚನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿವೆ.
ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಡ್ಜ್ ಪರಿಸ್ಥಿತಿಯನ್ನು “ರಾಷ್ಟ್ರೀಯ ತುರ್ತುಸ್ಥಿತಿ’ ಎಂದು ಘೋಷಿಸಿದ್ದಾರೆ. ಕಾಡ್ಗಿಚ್ಚಿನ ಪರಿಣಾಮವಾಗಿ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಯನ್ನು ರದ್ದುಗೊಳಿಸಿದ್ದು, ರೆಕಾರ್ಡ್ ಮಾಡಿದ ಕಾರ್ಯಕ್ರಮಗಳನ್ನು ಬಿತ್ತರಿಸಲಾಗುವುದು ಎಂದು ತಿಳಿದು ಬಂದಿದೆ.
ಗಾಯಗೊಂಡಿರುವ ಸುಮಾರು 23 ಜನರಿಗೆ ಚಿಕಿತ್ಸೆ ನೀಡಿರುವುದಾಗಿ ಎಂಡಿಎ ಹೇಳಿದೆ. ಗಾಯಾಳುಗಳಲ್ಲಿ ಇಬ್ಬರು ಗರ್ಭಿಣಿಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ.
“ನಾವು ರಾಷ್ಟ್ರೀಯ ತುರ್ತುಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಜೀವಗಳನ್ನು ಉಳಿಸಲು ಮತ್ತು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಸಂಪನ್ಮೂಲಗಳನ್ನು ಸಜ್ಜುಗೊಳಿಸುತ್ತಿದ್ದೇವೆ”, ಎಂದು ರಕ್ಷಣಾ ಸಚಿವ ಇಸ್ರೇಲ್ ಕಾಟ್ಝ್ ತಮ್ಮ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಾರದ ಹಿಂದೆ ಬೆಂಕಿಯಿಂದ ನಾಶವಾದ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡ ಕಾರಣ ಪೊಲೀಸರು ಜೆರುಸಲೆಮ್- ಟೆಲ್ ಅವಿವ್ ನ ಮುಖ್ಯ ಹೆದ್ದಾರಿಯನ್ನು ಮುಚ್ಚಿ ನಿವಾಸಿಗಳನ್ನು ಸ್ಥಳಾಂತರಿಸಿದ್ದಾರೆ. ಸಾವಿರಾರು ಜನರು ವಾಸಿಸುವ ಪ್ರದೇಶವನ್ನು ಈಗಾಗಲೇ ರಕ್ಷಣಾ ಕಾರ್ಯಚಾರಣೆಯ ಭಾಗವಾಗಿ ತೆರವುಗೊಳಿಸಲಾಗಿದೆ.
ದಶಕದಲ್ಲೇ ಸಂಭವಿಸಿದ ಅತೀ ಭೀಕರ ಅಗ್ನಿ ದುರಂತ ಇದಾಗಿದೆ ಎನ್ನಲಾಗಿದೆ. ಬೆಂಕಿಯನ್ನು ನಂದಿಸಲು ಹೆಲಿಕಾಪ್ಟರ್ ಬಳಕೆಯನ್ನೂ ಮಾಡಲಾಗಿದೆ. ಕಾಡ್ಗಿಚ್ಚಿನ ಪ್ರದೇಶವನ್ನು ಆವರಿಸಿಕೊಂಡಿರುವ ವಸತಿ ಸಮುಚ್ಚಯಗಳ ಬಳಿ ಆಂಬ್ಯುಲೆನ್ಸ್ ಗಳನ್ನೂ ಇರಿಸಲಾಗಿದೆ ಎಂದು MDA ತಿಳಿಸಿದೆ. ಇಸ್ರೇಲ್ ವಿದೇಶಾಂಗ ಸಚಿವಾಲಯವು ಗ್ರೀಸ್, ಸೈಪ್ರಸ್, ಪ್ರೊಯೇಷಿಯಾ, ಇಟಲಿ ಮತ್ತು ಬಲ್ಲೇರಿಯಾ ಸೇರಿದಂತೆ ಹತ್ತಿರದ ದೇಶಗಳನ್ನು ಸಹಾಯಕ್ಕಾಗಿ ಸಂಪರ್ಕಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಇಟಲಿ ಮತ್ತು ಪ್ರೊಯೇಷಿಯಾದಿಂದ ಮೂರು ವಿಮಾನಗಳು ಶೀಘ್ರದಲ್ಲೇ ಬರಲಿವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ