ಬದ್ರಿಯಾ ಜಮಾಅತ್ ಕಮಿಟಿ ಎಲಿಮಲೆ ಸುಳ್ಯ ತಾಲೂಕು ಇದರ ವತಿಯಿಂದ ಆಧ್ಯಾತ್ಮಿಕ ನೇತಾರ ಸೈಯಿದ್ ಕುಂಜಿಲಂ ತಂಙಳ್ ಇವರ ನೇತೃತ್ವದಲ್ಲಿ ನಡೆಸಿಕೊಂಡು ಬರುತ್ತಿರುವ ಮಾಸಿಕ ಸ್ವಲಾತ್ ಇದರ ವಾರ್ಷಿಕೋತ್ಸವ , ಹಿಫ್ಲುಲ್ ಕುರ್ಆನ್ ಉದ್ಘಾಟನೆ ಹಾಗೂ ಇಕ್ರಾಮುಸ್ಸುನ್ನ ದರ್ಸ್ ಇದರ ಶೈಕ್ಷಣಿಕ ವರ್ಷದ ಉದ್ಘಾಟನೆಯು ಇಂದು ದಿನಾಂಕ ಮೇ 2 ರಂದು ಮಗ್ರಿಬ್ ನಮಾಝಿನ ಬಳಿಕ ಎಲಿಮಲೆ ಮಸೀದಿ ವಠಾರದಲ್ಲಿ ನಡೆಯಲಿದೆ.
ಜಮಾಅತ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಪಾಣಾಜೆ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಪ್ರತಿಮ ಪಂಡಿತರೂ ಧಾರ್ಮಿಕ ನೇತಾರರೂ ಆಗಿರುವ ಸೈಯಿದ್ ಝೈನುಲ್ ಆಬಿದೀನ್ ತಂಗಳ್ ದುಗಲಡ್ಕ ಇವರುಗಳು ಉದ್ಘಾಟನೆ ಮಾಡಲಿದ್ದಾರೆ.
ಹಿಫ್ಳುಲ್ ಕುರ್ಆನ್ ಉಧ್ಘಾನೆಯನ್ನು ಸೈಯಿದ್ ಕುಂಜಿಲಂ ತಂಙಳ್ ರವರು ನೆರವೇರಿಸಲಿದ್ದಾರೆ.
ಸ್ವಲಾತ್ ಮಜ್ಲಿಸ್ ಹಾಗೂ ಪ್ರಾರ್ಥನಾ ಕೂಟದ ನೇತೃತ್ವವನ್ನು ಅಪ್ರತಿಮ ವಿಧ್ವಾಂಸರೂ ಆಧ್ಯಾತ್ಮಿಕ ಮುಸ್ಲಿಂ ನಾಯಕರೂ ಆದ ಬಾಯಾರ್ ತಂಙಳ್ ರವರು ವಹಿಸಲಿದ್ದಾರೆ.
ಸುಪ್ರಸಿದ್ಧ ವಾಗ್ಮಿ ಸಮದ್ ಸಖಾಫಿ ಮಾಯನಾಡು ಧಾರ್ಮಿಕ ಉಪನ್ಯಾಸ ನೀಡುವ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಮತಪಂಡಿತರೂ ಸಾಮಾಜಿಕ -ಧಾರ್ಮಿಕ ನೇತಾರರೂ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿರುತ್ತಾರೆ
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ