ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವ ಬಗ್ಗೆ ತಿಳಿದು ಬಂದಿದೆ.
ಇದು ಯಾವುದೇ ಕೋಮು ದ್ವೇಷದಿಂದ ಕೂಡಿದ ಹತ್ಯೆ ಅಲ್ಲ, ರೌಡಿಗಳ ಗ್ಯಾಂಗ್ ಸಂಬಂಧಿತ ಹತ್ಯೆಯಾಗಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ವಿವರ ಹಾಗೂ ಅಧಿಕೃತ ಪ್ರಕಟಣೆ ಪೊಲೀಸ್ ಇಲಾಖೆಯಿಂದ ಇನ್ನಷ್ಟೇ ಬರಬೇಕಿದೆ.
ಮಂಗಳೂರಿನ ಹೊರವಲಯದ ಬಜ್ಪೆ ಕಿನ್ನಿಪದವು ಎಂಬಲ್ಲಿ ನಿನ್ನೆ ರಾತ್ರಿ ರೌಡಿಶೀಟರ್ ಸುಹಾಸ್ ಶೆಟ್ಟಿ ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಕೊಲೆ ನಡೆಸಿ ಪರಾರಿಯಾಗಿದ್ದರು. ಘಟನೆಯ ವೀಡಿಯೋವನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಮುಸ್ಲಿಂ ಮಹಿಳೆಯರ ಪಾತ್ರವು ದುಷ್ಕರ್ಮಿಗಳ ಶೀಘ್ರ ಪತ್ತೆಯಲ್ಲಿ ನಿರ್ಣಾಯಕವಾಗಿದೆ. ದುಷ್ಕರ್ಮಿಗಳ ಕಾರು ಮತ್ತು ಪಿಕಪ್ ವಾಹನಗಳು ಸೇರಿದಂತೆ ಹಂತಕರ ಸಂಪೂರ್ಣ ಚಲನವಲನಗಳು ವೀಡಿಯೋದಲ್ಲಿ ಸೆರೆಹಿಡಿಯಲಾಗಿತ್ತು.
ಹತ್ಯೆ ಬಳಿಕ ತೀವ್ರ ಹಿಂದುತ್ವವಾದಿಗಳು ಅದನ್ನು ಫಾಝಿಲ್ ಹತ್ಯೆಯ ಪ್ರತೀಕಾರವೆಂಬಂತೆ ವೈಭವೀಕರಿಸಿ ಹತ್ಯೆಗೆ ಕೋಮು ಬಣ್ಣವನ್ನು ಬಳಿದು ಇಂದು ಜಿಲ್ಲಾ ಬಂದ್ ಗೆ ಕರೆ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಬಿಲದಿಂದ ಹೊರ ಬಂದ ರಾಜಕೀಯ ನಾಯಕರು ಸಹ ಇದರ ಲಾಭ ಕೊಯ್ಯಲು ಪ್ರಚೋದನೆಕಾರಿ ಹೇಳಿಕೆ ನೀಡಿ ಬೆಂಕಿಗೆ ತುಪ್ಪ ಸುರಿಯುವ ಪ್ರಯತ್ನ ಮಾಡಿದರು. ಇದರ ಫಲವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಅಮಾಯಕ ಮುಸ್ಲಿಮರ ಮೇಲೆ ಕೊಲೆ ಯತ್ನದಂತಹಾ ತಲವಾರು ದಾಳಿಗಳು ನಡೆದಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ