ಎಸ್ ಎಸ್ ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಲಿ ತುರ್ಕಳಿಕೆ ರಾಜ್ಯ ಸರ್ಕಾರಕ್ಕೇ ನೇರ ಸವಾಲು
ಮಂಗಳೂರು: ಕರಾವಳಿಯಲ್ಲಿ ವಾರಗಳ ಒಳಗೆ ಹತ್ಯೆಯಾದ ಎರಡು ಪ್ರತ್ಯೇಕ ಘಟನೆಗಳು ರಾಜ್ಯದ ಗಮನ ಸೆಳೆದಿದ್ದು, ಕೋಮು ಬಣ್ಣ ಹಚ್ಚುವ ದೊಡ್ಡ ಷಡ್ಯಂತ್ರವೊಂದು ಬಿಲಸೇರಿದೆ. ಅಶ್ರಫ್ ಎಂಬ ಅಮಾಯಕ ಮಾನಸಿಕ ಅಸ್ವಸ್ಥ ನನ್ನು ಗುಂಪು ಹತ್ಯೆ ಮಾಡಿದ ಅಕ್ರಮಿಗಳ ಬಗ್ಗೆ ತುಟಿ ಬಿಚ್ಚದ ಮಾಧ್ಯಮಗಳು, ನಟೋರಿಯಸ್ ರೌಡಿ ಬಗ್ಗೆ ವ್ಯಾಪಕವಾದ ಪ್ರಚಾರ ಕೊಟ್ಟು ಕರಾವಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದೆ.
ಇದೀಗ ಆರೋಪಿಗಳ ಬಂಧನವಾಗಿದ್ದು, ಪ್ರತೀಕಾರದ ಗ್ಯಾಂಗ್ ವಾರ್ ಆಗಿ ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಆದರೆ ಈ ನಡುವೆ ಕರಾವಳಿಯ ಮೂರಕ್ಕೂ ಹೆಚ್ಚು ಕಡೆ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೊಲೆಯತ್ನ ನಡೆದಿದ್ದು ಇದಕ್ಕೆ ಸ್ಪಷ್ಟವಾಗಿ ಜಿಲ್ಲೆಗೆ ಬೆಂಕಿ ಹಚ್ಙಲು ಪ್ರಯತ್ನಿಸಿದ ಮಾಧ್ಯಮಗಳು, ರಾಜಕಾರಣಿಗಳು, ಕೋಮುವಾದಿಗಳು ನೇರ ಹೊಣೆಗಾರರಾಗಿದ್ದಾರೆ.
ಕರಾವಳಿಯಲ್ಲಿ ನಿರಂತರವಾಗಿ ನಡೆಯುವ ಇಂತಹ ಕೋಮುದ್ವೇಷ ಗಲಭೆಗಳಿಗೆ ಬೆಂಕಿ ಹಚ್ಙುವ ದ್ವೇಷ ಭಾಷಣಗಳು ಪ್ರಮುಖ ಕಾರಣ. ಇದನ್ನು ಚಿವುಟಿ ಹಾಕಲು ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಎಲ್ಲಾ ಸರ್ಕಾರಗಳು ನಿಷ್ಕ್ರಿಯವಾಗಿದ್ದು ,ಯಾರಿಂದಲೂ ಪ್ರಾಮಾಣಿಕ ಪ್ರಯತ್ನ ನಡೆದಿಲ್ಲ. ಆದ್ದರಿಂದ ಈ ಗಲಭೆಯ ಹಿಂದಿನ ಕೋಮು ಭಾಷಣಗಳನ್ನೂ , ಮಾಧ್ಯಮ ವರ್ತನೆಗಳನ್ನೂ ನಿಯಂತ್ರಣಕ್ಕೆ ತಾರದಿದ್ದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಲುದೊಡ್ಡ ಬೆಲೆ ಭವಿಷ್ಯದಲ್ಲಿ ತೆರಬೇಕಾಗುತ್ತದೆಂದು ಅಲಿ ತುರ್ಕಳಿಕೆ ಎಚ್ಚರಿಸಿದರು.
ಸರ್ಕಾರ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಎಚ್ಚರಗೊಳ್ಳದಿದ್ದರೆ, ಕರ್ನಾಟಕ ರಾಜ್ಯ ಎಸ್ ಎಸ್ ಎಫ್, ಆಡಳಿತ ಸರ್ಕಾರವನ್ನು ಎಚ್ಚರಿಸಲು ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಅಲಿ ತುರ್ಕಳಿಕೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ