ಎಸ್ ಎಸ್ ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಲಿ ತುರ್ಕಳಿಕೆ ರಾಜ್ಯ ಸರ್ಕಾರಕ್ಕೇ ನೇರ ಸವಾಲು
ಮಂಗಳೂರು: ಕರಾವಳಿಯಲ್ಲಿ ವಾರಗಳ ಒಳಗೆ ಹತ್ಯೆಯಾದ ಎರಡು ಪ್ರತ್ಯೇಕ ಘಟನೆಗಳು ರಾಜ್ಯದ ಗಮನ ಸೆಳೆದಿದ್ದು, ಕೋಮು ಬಣ್ಣ ಹಚ್ಚುವ ದೊಡ್ಡ ಷಡ್ಯಂತ್ರವೊಂದು ಬಿಲಸೇರಿದೆ. ಅಶ್ರಫ್ ಎಂಬ ಅಮಾಯಕ ಮಾನಸಿಕ ಅಸ್ವಸ್ಥ ನನ್ನು ಗುಂಪು ಹತ್ಯೆ ಮಾಡಿದ ಅಕ್ರಮಿಗಳ ಬಗ್ಗೆ ತುಟಿ ಬಿಚ್ಚದ ಮಾಧ್ಯಮಗಳು, ನಟೋರಿಯಸ್ ರೌಡಿ ಬಗ್ಗೆ ವ್ಯಾಪಕವಾದ ಪ್ರಚಾರ ಕೊಟ್ಟು ಕರಾವಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದೆ.
ಇದೀಗ ಆರೋಪಿಗಳ ಬಂಧನವಾಗಿದ್ದು, ಪ್ರತೀಕಾರದ ಗ್ಯಾಂಗ್ ವಾರ್ ಆಗಿ ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಆದರೆ ಈ ನಡುವೆ ಕರಾವಳಿಯ ಮೂರಕ್ಕೂ ಹೆಚ್ಚು ಕಡೆ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೊಲೆಯತ್ನ ನಡೆದಿದ್ದು ಇದಕ್ಕೆ ಸ್ಪಷ್ಟವಾಗಿ ಜಿಲ್ಲೆಗೆ ಬೆಂಕಿ ಹಚ್ಙಲು ಪ್ರಯತ್ನಿಸಿದ ಮಾಧ್ಯಮಗಳು, ರಾಜಕಾರಣಿಗಳು, ಕೋಮುವಾದಿಗಳು ನೇರ ಹೊಣೆಗಾರರಾಗಿದ್ದಾರೆ.
ಕರಾವಳಿಯಲ್ಲಿ ನಿರಂತರವಾಗಿ ನಡೆಯುವ ಇಂತಹ ಕೋಮುದ್ವೇಷ ಗಲಭೆಗಳಿಗೆ ಬೆಂಕಿ ಹಚ್ಙುವ ದ್ವೇಷ ಭಾಷಣಗಳು ಪ್ರಮುಖ ಕಾರಣ. ಇದನ್ನು ಚಿವುಟಿ ಹಾಕಲು ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಎಲ್ಲಾ ಸರ್ಕಾರಗಳು ನಿಷ್ಕ್ರಿಯವಾಗಿದ್ದು ,ಯಾರಿಂದಲೂ ಪ್ರಾಮಾಣಿಕ ಪ್ರಯತ್ನ ನಡೆದಿಲ್ಲ. ಆದ್ದರಿಂದ ಈ ಗಲಭೆಯ ಹಿಂದಿನ ಕೋಮು ಭಾಷಣಗಳನ್ನೂ , ಮಾಧ್ಯಮ ವರ್ತನೆಗಳನ್ನೂ ನಿಯಂತ್ರಣಕ್ಕೆ ತಾರದಿದ್ದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಲುದೊಡ್ಡ ಬೆಲೆ ಭವಿಷ್ಯದಲ್ಲಿ ತೆರಬೇಕಾಗುತ್ತದೆಂದು ಅಲಿ ತುರ್ಕಳಿಕೆ ಎಚ್ಚರಿಸಿದರು.
ಸರ್ಕಾರ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಎಚ್ಚರಗೊಳ್ಳದಿದ್ದರೆ, ಕರ್ನಾಟಕ ರಾಜ್ಯ ಎಸ್ ಎಸ್ ಎಫ್, ಆಡಳಿತ ಸರ್ಕಾರವನ್ನು ಎಚ್ಚರಿಸಲು ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಅಲಿ ತುರ್ಕಳಿಕೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ