ಬಾಲ್ಯ ಕಾಲದಲ್ಲಿ ಬಡತನವನ್ನು ಅನುಭವಿಸುವ ಮಕ್ಕಳು ಉಳಿದ ಮಕ್ಕಳಿಗಿಂತ ಧೈರ್ಯವಂತ ಹಾಗೂ ಜೀವನದಲ್ಲಿ ಬಂದೆರಗುವ ಸವಾಲನ್ನು ಎದುರಿಸಲು ಶಕ್ತವಾಗಿರುತ್ತಾರೆ.
ಹಾಗಾಗಿ, ಬಡತನದ ಬಗ್ಗೆ ಮಕ್ಕಳಲ್ಲಿ ಹತಾಶೆ ಮೂಡಿಸುವ ಬದಲಾಗಿ ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ತುಂಬುವ ಕೆಲಸವನ್ನು ಪೋಷಕರು ಮಾಡಬೇಕು ಎಂದು ಖ್ಯಾತ ತರಬೇತುದಾರ ಹಾಗೂ ಭಾಷಣಕಾರ ರಫೀಕ್ ಮಾಸ್ಟರ್ ಆತೂರು ಅವರು ಹೇಳಿದರು.


ಅವರು ತಾಜುಲ್ ಉಲಮಾ ರಿಲೀಫ್ ಎಂಡ್ ಚಾರಿಟೇಬಲ್ ಟ್ರಸ್ಟ್ (ರಿ) ದಕ ವತಿಯಿಂದ ಬಂಟ್ವಾಳ ಲಯನ್ಸ್ ಭವನದಲ್ಲಿ ನಡೆದ, ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ಶೈಕ್ಷಣಿಕ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು.
ಕುಲಾಲ್ ಜುಮಾ ಮಸ್ಜಿದ್ ಖತೀಬರಾದ ಮಸೂದ್ ಸಅದಿ, ಪ್ರಾರ್ಥನೆ ಹಾಗೂ ಆಶೀರ್ವಚನ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಮುನೀರ್ ಸಖಾಫಿ ಉಳ್ಳಾಲ, ಅಬ್ದುಲ್ ರಶೀದ್ ಮುಸ್ಲಿಯಾರ್, ಮ್ಯಾನೇಜರ್ ಅಲ್ ಮದೀನಾ ಮಂಜನಾಡಿ, ಶರೀಫ್ ಮದನಿ ಪಾಂಡವರಕಲ್ಲು, ಅಕ್ಷಯ ಚಾರಿಟೇಬಲ್ ಟ್ರಸ್ಟ್ ನ ಕರೀಮ್ ಕದ್ಕಾರ್, ತಾಜುಲ್ ಉಲಮಾ ರಿಲೀಫ್ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ವಗ್ಗ, ಮುಹಮ್ಮದ್ ಕುಂಞಿ ಜೋಗಿಬೆಟ್ಟು, ಎಸ್ಡಿಎಂಸಿ ಸಮನ್ವಯ ಸಮಿತಿಯ ಮೊಯ್ದೀನ್ ಪೆರ್ನೆ, ಇಲ್ಯಾಸ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.
ಟ್ರಸ್ಟ್ ಕಾರ್ಯದರ್ಶಿ ರಾಝಿಕ್ ಬಿಎಮ್ ಸ್ವಾಗತಿಸಿದರು.ಕರೀಮ್ ಕದ್ಕಾರ್ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ