ಮಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಸರ್ಕಾರವು ನೀರಿನ ಸಮಸ್ಯೆ ನಿವಾರಣೆಗಾಗಿ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸುತ್ತದೆ. ಆದರೆ, ನಗರದ ಹೊರವಲಯದ ಕೃಷ್ಣಾಪುರದಲ್ಲಿ ಸುಮಾರು ದಿನಗಳಿಂದ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದೆ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆಂದು ತಿಳಿದುಬಂದಿದೆ.
ಸಾಮಾನ್ಯವಾಗಿ ಪಂಚಾಯಿತಿ ಅಧೀನದಲ್ಲಿ ಆಯಾ ವಾರ್ಡ್ ಮೆಂಬರ್ ಗಳು ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುತ್ತಾರೆ. ನಗರ ಪ್ರದೇಶಗಳಲ್ಲಾದರೆ, ಆಯಾ ಏರಿಯಾದ ಕಾರ್ಪೋರೇಟರ್ ಗಳು ಸೂಕ್ತ ಪರಿಹಾರವನ್ನು ಕಂಡುಕೊಳ್ಳುತ್ತಾರೆ. ಆದರೆ, ಕೃಷ್ಣಾಪುರ ಪ್ರದೇಶದಲ್ಲಿ ಇದೇ ಮೊದಲಬಾರಿಗೆ ಕಾರ್ಪೊರೇಷನ್ ನೀರು ಸರಬರಾಜನ್ನು ಸ್ಥಗಿತ ಗೊಳಿಸಿ ನಾಗರಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಈ ಬಗ್ಗೆ ಕಾರ್ಪೊರೇಟರ್ ಆಗಲಿ, ಬೇರೆ ಯಾರೇ ಚುನಾಯಿತ ವ್ಯಕ್ತಿಯಾಗಲಿ ಸಮಸ್ಯೆ ನಿವಾರಣೆಗೆ ಮುಂದಾಗಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವರು ಭಾರಿ ಹಣ ತೆತ್ತು ಟ್ಯಾಂಕರ್ ನೀರನ್ನು ಖರೀದಿಸಿ, ಅಲ್ಪ ಮಟ್ಟಿನ ಪರಿಹಾರ ಕಂಡುಕೊಳ್ಳುತ್ತಾರೆ,ಆದರೆ, ಬಡವರ ಜೀವನ ನೀರಿಲ್ಲದೆ ಬಲು ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರದಲ್ಲೇ ಸೂಕ್ತ ಪರಿಹಾರ ಒದಗಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ