
ಎಸ್ ವೈಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಸಮಿತಿ ನಾಯಕರಿಗೂ ಈಸ್ಟ್ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ, ಉಪ್ಪಿನಂಗಡಿ, ಕಡಬ, ಪುತ್ತೂರು, ವಿಟ್ಲ, ಸುಳ್ಯ ಝೋನ್ ನ ಕಾರ್ಯಕಾರಿ ಸಮಿತಿಯ ನಾಯಕರಿಗೆ ‘ಟೀಮ್ ಟಾಕ್’ ಎಂಬ ನಾಯಕತ್ವ ಶಿಬಿರವು ಮೇ 28 ಬುಧವಾರ ದಂದು ಅಲ್ ಮದೀನತುಲ್ ಮುನವ್ವರ ಮೂಡಡ್ಕ ಸಂಸ್ಥೆಯಲ್ಲಿ ಜಿಲ್ಲಾಧ್ಯಕ್ಷ ಅಶ್ರಫ್ ಸಖಾಫಿ ಮೂಡಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಲ್ಜಹ್ ಉಜಿರೆ ಸ್ಥಾಪಕರಾದ ಅಸ್ಸಯ್ಯದ್ ಜಲಾಲುದ್ದೀನ್ ತಂಙಳ್ ರವರು ಆಧ್ಯಾತ್ಮಿಕ ನಾಯಕತ್ವ ವಹಿಸಲಿದ್ದಾರೆ. ಮೂಡಡ್ಕ ಸಂಸ್ಥೆಯ ಅಧ್ಯಕ್ಷ ಅಸ್ಸಯ್ಯದ್ ಇಸ್ಮಾಯಿಲ್ ಹಾದಿ ತಂಙಳ್ ಉಜಿರೆ ಮುನ್ನುಡಿ ಭಾಷಣ ಮಾಡಲಿದ್ದಾರೆ. ಖ್ಯಾತ ವಾಗ್ಮಿ ಸಂಘಟಕ, ಚಿಂತಕ ರಾಜ್ಯ ನಾಯಕ ಡಾ. ಅಬ್ದುಲ್ ರಶೀದ್ ಸಖಾಫಿ ಝೈನಿ ಅಲ್ ಕಾಮಿಲ್ ರವರು ನಾಯಕತ್ವ ಎಂಬ ವಿಷಯದಲ್ಲಿ ಚರ್ಚೆ ಮಂಡಿಸಲಿದ್ದಾರೆ .
ಜಿಲ್ಲೆಯ ಎಸ್ ವೈಎಸ್ ನ ನೂರೈವತ್ತು ನಾಯಕರು ಭಾಗವಹಿಸಲಿರುವ ಪ್ರಸ್ತುತ ಕ್ಯಾಂಪ್ ಎಸ್ ವೈಎಸ್ ದ.ಕ ಈಸ್ಟ್ ಜಿಲ್ಲಾ ನೂತನ ಸಾರಥ್ಯದಲ್ಲಿ ನಡೆಯುವ ಪ್ರಥಮ ಕಾರ್ಯಕ್ರಮವಾಗಿದೆ. ಎಂದು ಎಸ್ ವೈ ಎಸ್ ದ.ಕ ಜಲ್ಲಾ ಈಸ್ಟ್ ಐಟಿ ಮೀಡಿಯಾ ಟೀಮ್ ಪ್ರಕಟನೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ