ಅಡ್ಡೂರು ಪೊಳಲಿ ಸಮೀಪದ ಕೊಳ್ತಮಜಲು ಎಂಬಲ್ಲಿ ಅಮಾಯಕ ಯುವಕನನ್ನು ಕೊಲೆ ಮಾಡಿರುವುದನ್ನು ಎಸ್ವೈಎಸ್ ದಕ ವೆಸ್ಟ್ ಘಟಕವು ತೀವ್ರವಾಗಿ ಖಂಡಿಸಿದೆ.
ಇತ್ತೀಚೆಗೆ ದಕ ಜಿಲ್ಲೆಯಲ್ಲಿ ನಡೆದ ಎರಡು ಹತ್ಯೆಗಳ ನಂತರ ಕೋಮುವಾದಿ ಶಕ್ತಿಗಳು ಬಹಿರಂಗವಾಗಿ ಪ್ರತೀಕಾರದ ಹೇಳಿಕೆ ಕೊಡುತ್ತಿರುವಾಗಲೂ ಅವರ ವಿರುದ್ಧ ಕ್ರಮ ಕೈಗೊಳ್ಳದಿರುವುದೇ ಸರಣಿ ಕೊಲೆಗಳು ಮುಂದುವರಿಯಲು ಕಾರಣವಾಗಿದೆ.
ವರ್ಷಗಳ ಹಿಂದೆ ನಡೆದ ಯಾವುದೋ ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಮಸೂದ್ ಎಂಬವರನ್ನು ಕೊಂದು ಪ್ರತೀಕಾರ ತೀರಿಸಿದ್ದೇವೆ ಎಂಬರ್ಥದಲ್ಲಿ ಮಂಗಳೂರಿನ ದ್ವೇಷ ಭಾಷಣಕಾರನೋರ್ವ ಬಹಿರಂಗ ಹೇಳಿಕೆ ಕೊಟ್ಟಿದ್ದ. ಅಂತಹ ಪುಂಡರ ವಿರುದ್ಧ ಈ ತನಕ ಕ್ರಮ ಜರಗಿಸಿಲ್ಲ. ಸರಕಾರ ಹಾಗೂ ಪೊಲಿಸ್ ಇಲಾಖೆಯ ಇಂತಹ ಮೃದುಧೋರಣೆಗಳಿಂದಾಗಿಯೇ ಅಮಾಯಕರು ಬಲಿಯಾಗುತ್ತಿದ್ದಾರೆ .
ಅಪರಾಧ ಕೃತ್ಯಗಳಿಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳುವ ಬದಲು, ಪ್ರತೀಕಾರ ತೀರಿಸುತ್ತೇವೆ ಎಂದು ಹೇಳಿಕೆ ಕೊಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಅವರನ್ನು ರಾಜಾರೋಷಾಗಿ ತಿರುಗಾಡಲು ಬಿಟ್ಟಿರುವುದು
ಅಪಾಯಕಾರಿ ಬೆಳವಣಿಗೆಯಾಗಿದೆ.ಅಂತಹವರನ್ನು ಜೈಲಿಗಟ್ಟಿದರೆ ಮಾತ್ರ ಸ್ವಸ್ಥ ಸಮಾಜ ನಿರ್ಮಿಸಲು ಸಾಧ್ಯ .ಎಂದು ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ