ರೌಡಿಶೀಟರ್ ಸುಹಾಸ್ ಹತ್ಯೆಯ ಬಳಿಕ ದ.ಕ ಜಿಲ್ಲೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹಲವು ಕಡೆ ಮುಸ್ಲಿಮರ ಹತ್ಯೆಯತ್ನ ನಡೆಲಾಗಿದೆ. ಅದರ ಮುಂದುವರಿದ ಭಾಗವಾಗಿ ಇಂದು ದಿನಾಂಕ 27.5.25 ರಂದು ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಕೊಳತ್ತಮಜಲು ಪ್ರದೇಶದ ಅಮಾಯಕ ಅಬ್ದುಲ್ ರಹೀಂ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುತ್ತಾರೆ. ಜೊತೆಯಲ್ಲಿದ್ದ ಶಾಫಿ ಎಂಬವರಿಗೂ ತೀವ್ರ ಸ್ವರೂಪದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಮುವಾದಿ ಸಂಘಟನೆಗಳ ನಾಯಕರು ನಿರಂತರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೂ ಗೃಹ ಇಲಾಖೆಯು ಎಚ್ಚೆತ್ತುಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಮುಸ್ಲಿಂ ಯುವಕನೊಬ್ಬನ ಹತ್ಯೆಯಾಗಿದೆ. ಇಂತಹದೊಂದು ಹತ್ಯೆಯ ಬಗ್ಗೆ, ಪ್ರತಿಕಾರದ ಬಗ್ಗೆ ಕೆಲವು ಸಂಘಟನೆಗಳ ನಾಯಕರು ದ್ವೇಷ ಭಾಷಣ ಮಾತಾಡುತ್ತಿದ್ದರೂ ಪೋಲೀಸ್ ಇಲಾಖೆ ಕಠಿನ ಕ್ರಮಗಳನ್ನು ಕೈಗೊಳ್ಳದಿರುವುದರಿಂದ ಒಬ್ಬ ಅಮಾಯಕ ಜೀವ ಕಳೆದುಕೊಳ್ಳಬೇಕಾದ ಅವಸ್ಥೆ ಉಂಟಾಗಿದೆ.
ಎರಡು ದಿನಗಳ ಹಿಂದಷ್ಟೇ ‘ಬಜ್ಪೆ ಚಲೋ’ ಕಾರ್ಯಕ್ರಮದ ಮೂಲಕ ಮುಸ್ಲಿಮರ ಮೇಲೆ ಪ್ರತಿಕಾರದ ಹತ್ಯೆಗೆ ಪ್ರಚೋದನಕಾರಿ ಭಾಷಣ ಮಾಡಲಾಗಿತ್ತು. ಅಮಾಯಕರ ಹತ್ಯೆ ನಡೆಸುವ ಮೂಲಕ ದುಷ್ಕರ್ಮಿಗಳು ಧರ್ಮಸೇವೆ ಮಾಡ ಹೊರಟಿರುವುದು ಅತ್ಯಂತ ನಾಚಿಕೆಗೇಡು ಮತ್ತು ಮನುಷ್ಯ ಸಮಾಜಕ್ಕೆ ಕಳಂಕ. ಸರಕಾರ ಇನ್ನಾದರು ಎಚ್ಚೆತ್ತು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ದ.ಕ ಜಿಲ್ಲೆಯಾಧ್ಯಂತ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ಜಿಲ್ಲಾ ವೆಸ್ಟ್ ಸಮಿತಿ ಆಗ್ರಹಿಸಿದೆ.
ಹತ್ಯೆ ಪ್ರಕರಣಗಳಲ್ಲಿ ಭಾಗಿಯಾದವರನ್ನು, ಪ್ರಚೋದನೆ ನೀಡಿದವರನ್ನು ಕೂಡಲೇ ಪತ್ತೆ ಹಚ್ಚಿ ಗಂಭೀರ ಪ್ರಕರಣಗಳನ್ನು ದಾಖಲಿಸಿ ಕಠಿನ ಕಾನೂನು ಕ್ರಮ ಜರಗಿಸಬೇಕು, ಹತ್ಯೆಯಾದ ಅಬ್ದುಲ್ ರಹೀಂ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ, ಹಲ್ಲೆಗೊಳಗಾದ ಶಾಫಿ ಅವರ ಆಸ್ಪತ್ರೆಯ ವೆಚ್ಚವನ್ನು ಸರಕಾರ ಭರಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಜಿಲ್ಲಾ ವೆಸ್ಟ್ ಅಧ್ಯಕ್ಷ ಹನೀಫ್ ಹಾಜಿ ಬಜ್ಪೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ.ಜಿಲ್ಲೆ ವೆಸ್ಟ್ ವತಿಯಿಂದ ರಾಜ್ಯ ಗೃಹ ಸಚಿವರು, ರಾಜ್ಯ ಪೋಲೀಸ್ ಮಹಾನಿರೀಕ್ಷಕರು, ದ.ಕ ಜಿಲ್ಲಾಧಿಕಾರಿ, ದ.ಕ.ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರವನ್ನೂ ಸಲ್ಲಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ