ರೌಡಿಶೀಟರ್ ಸುಹಾಸ್ ಹತ್ಯೆಯ ಬಳಿಕ ದ.ಕ ಜಿಲ್ಲೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹಲವು ಕಡೆ ಮುಸ್ಲಿಮರ ಹತ್ಯೆಯತ್ನ ನಡೆಲಾಗಿದೆ. ಅದರ ಮುಂದುವರಿದ ಭಾಗವಾಗಿ ಇಂದು ದಿನಾಂಕ 27.5.25 ರಂದು ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಕೊಳತ್ತಮಜಲು ಪ್ರದೇಶದ ಅಮಾಯಕ ಅಬ್ದುಲ್ ರಹೀಂ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುತ್ತಾರೆ. ಜೊತೆಯಲ್ಲಿದ್ದ ಶಾಫಿ ಎಂಬವರಿಗೂ ತೀವ್ರ ಸ್ವರೂಪದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಮುವಾದಿ ಸಂಘಟನೆಗಳ ನಾಯಕರು ನಿರಂತರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೂ ಗೃಹ ಇಲಾಖೆಯು ಎಚ್ಚೆತ್ತುಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಮುಸ್ಲಿಂ ಯುವಕನೊಬ್ಬನ ಹತ್ಯೆಯಾಗಿದೆ. ಇಂತಹದೊಂದು ಹತ್ಯೆಯ ಬಗ್ಗೆ, ಪ್ರತಿಕಾರದ ಬಗ್ಗೆ ಕೆಲವು ಸಂಘಟನೆಗಳ ನಾಯಕರು ದ್ವೇಷ ಭಾಷಣ ಮಾತಾಡುತ್ತಿದ್ದರೂ ಪೋಲೀಸ್ ಇಲಾಖೆ ಕಠಿನ ಕ್ರಮಗಳನ್ನು ಕೈಗೊಳ್ಳದಿರುವುದರಿಂದ ಒಬ್ಬ ಅಮಾಯಕ ಜೀವ ಕಳೆದುಕೊಳ್ಳಬೇಕಾದ ಅವಸ್ಥೆ ಉಂಟಾಗಿದೆ.
ಎರಡು ದಿನಗಳ ಹಿಂದಷ್ಟೇ ‘ಬಜ್ಪೆ ಚಲೋ’ ಕಾರ್ಯಕ್ರಮದ ಮೂಲಕ ಮುಸ್ಲಿಮರ ಮೇಲೆ ಪ್ರತಿಕಾರದ ಹತ್ಯೆಗೆ ಪ್ರಚೋದನಕಾರಿ ಭಾಷಣ ಮಾಡಲಾಗಿತ್ತು. ಅಮಾಯಕರ ಹತ್ಯೆ ನಡೆಸುವ ಮೂಲಕ ದುಷ್ಕರ್ಮಿಗಳು ಧರ್ಮಸೇವೆ ಮಾಡ ಹೊರಟಿರುವುದು ಅತ್ಯಂತ ನಾಚಿಕೆಗೇಡು ಮತ್ತು ಮನುಷ್ಯ ಸಮಾಜಕ್ಕೆ ಕಳಂಕ. ಸರಕಾರ ಇನ್ನಾದರು ಎಚ್ಚೆತ್ತು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ದ.ಕ ಜಿಲ್ಲೆಯಾಧ್ಯಂತ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ಜಿಲ್ಲಾ ವೆಸ್ಟ್ ಸಮಿತಿ ಆಗ್ರಹಿಸಿದೆ.
ಹತ್ಯೆ ಪ್ರಕರಣಗಳಲ್ಲಿ ಭಾಗಿಯಾದವರನ್ನು, ಪ್ರಚೋದನೆ ನೀಡಿದವರನ್ನು ಕೂಡಲೇ ಪತ್ತೆ ಹಚ್ಚಿ ಗಂಭೀರ ಪ್ರಕರಣಗಳನ್ನು ದಾಖಲಿಸಿ ಕಠಿನ ಕಾನೂನು ಕ್ರಮ ಜರಗಿಸಬೇಕು, ಹತ್ಯೆಯಾದ ಅಬ್ದುಲ್ ರಹೀಂ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ, ಹಲ್ಲೆಗೊಳಗಾದ ಶಾಫಿ ಅವರ ಆಸ್ಪತ್ರೆಯ ವೆಚ್ಚವನ್ನು ಸರಕಾರ ಭರಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಜಿಲ್ಲಾ ವೆಸ್ಟ್ ಅಧ್ಯಕ್ಷ ಹನೀಫ್ ಹಾಜಿ ಬಜ್ಪೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ.ಜಿಲ್ಲೆ ವೆಸ್ಟ್ ವತಿಯಿಂದ ರಾಜ್ಯ ಗೃಹ ಸಚಿವರು, ರಾಜ್ಯ ಪೋಲೀಸ್ ಮಹಾನಿರೀಕ್ಷಕರು, ದ.ಕ ಜಿಲ್ಲಾಧಿಕಾರಿ, ದ.ಕ.ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರವನ್ನೂ ಸಲ್ಲಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ