ಬೆಂಗಳೂರು: ಮಂಗಳೂರಿನಲ್ಲಿ ಅಮಾಯಕ ಅಬ್ದುಲ್ ರಹ್ಮಾನ್ ಹತ್ಯೆಯ ಕುರಿತಾಗಿ ಸಮುದಾಯದ ಆಕ್ರೋಶ ಮತ್ತು ಗೊಂದಲಗಳ ಬಗ್ಗೆ ಅಲ್ಪಸಂಖ್ಯಾತ ಇಲಾಖೆ ಮತ್ತು ವಕ್ಫ್ ಸಚಿವರಾದ B.Z Zameer Ahmed Khan ಹಾಗು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದಾಗಿ ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಇದರ ಉಪಾಧ್ಯಕ್ಷರಾದ ಮೌಲಾನಾ ಎನ್ ಕೆ ಎಮ್ ಶಾಫಿ ಸಅದಿ ಬೆಂಗಳೂರು ತಿಳಿಸಿದ್ದಾರೆ.
ತಮ್ಮ ಅಧಿಕೃತ ಫೇಸ್ಬುಕ್ ಖಾತೆಯ ಮೂಲಕ ಇದರ ಬಗ್ಗೆ ಮಾಹಿತಿ ನೀಡಿರುವ ಶಾಫಿ ಸಅದಿ ಅವರು, ಮುಖ್ಯವಾಗಿ ಕೆಲವು ಬೇಡಿಕೆಗಳನ್ನು ಮಾನ್ಯ ವಕ್ಫ್ ಸಚಿವರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅವರ ಗಮನಕ್ಕೆ ತರಲಾಗಿದೆ ಎಂದಿದ್ದಾರೆ.
ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು
1. ತಕ್ಷಣ ಸರ್ಕಾರದ ಭಾಗವಾಗಿ ಪ್ರತಿನಿಧಿಸುವವರು ಮಂಗಳೂರು ಭೇಟಿ ನೀಡಬೇಕು.
2. ಕನಿಷ್ಠ 25ಲಕ್ಷ ಪರಿಹಾರ ಘೋಷಣೆ ನಡೆಯಬೇಕು.
3. ಘಟನೆಗೆ ಕಾರಣವಾದ ಕೋಮುದ್ವೇಷ ಭಾಷಣದ ಆರೋಪಿಗಳನ್ನು ಬಂಧಿಸಬೇಕು.
4. Anti ಕಮ್ಯೂನಲ್ ಫೋರ್ಸ್ ತಕ್ಷಣ ಕಾರ್ಯಾಚರಣೆ ಆರಂಭಿಸಿ ಕರಾವಳಿಯ ಈ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
5. ಘಟನೆಗೆ ಕಾರಣವಾದ ಆರೋಪಿಗಳ ಮೇಲೆ ಕಠಿನ ಕಾನೂನಿನ ಅಡಿಯಲ್ಲಿ ಬಂಧಿಸಿ ಶಿಕ್ಷೆ ನೀಡಲು ಕಾರಣವಾಗುವ ಹೆಜ್ಜೆ ಸರ್ಕಾರ ಮುಂದಡಿಯಿಡಬೇಕು.
6. ಕರಾವಳಿಯ ಈ ಘಟನೆಗೆ ಪೋಲೀಸ್ ಇಲಾಖೆಯ ನಿರ್ಲಕ್ಷ್ಯದ ಸಮಗ್ರ ತನಿಖೆ ನಡೆಸಿ , ಕರಾವಳಿ ಪೋಲೀಸ್ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತಕ್ಷಣ ತರಬೇಕು.
ಸನ್ಮಾನ್ಯ ವಕ್ಫ್ ಸಚಿವರು ಮತ್ತು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳು ನೇರವಾಗಿ ಮುಖ್ಯಮಂತ್ರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಶೀಘ್ರ ಕ್ರಮಕ್ಕಾಗಿ ನಾಳೆ ಬೆಳಿಗ್ಗೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು , ಪೋಲೀಸ್ ಮಹಾ ನಿರ್ದೇಶಕರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಸಭೆಯಲ್ಲಿ ಮಾಜಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಅನ್ವರ್ ಪಾಷಾ ಹಾಜರಿದ್ದರು.
ಅಬ್ದುಲ್ ರಹ್ಮಾನ್ ದಫನ ಹಾಗೂ ಅಂತಿಮ ಯಾತ್ರೆಯಲ್ಲಿ ಶಾಂತಿ ಕಾಪಾಡಿಕೊಂಡ ಸಮುದಾಯದ ಬಾಂಧವರ ತಾಳ್ಮೆಯನ್ನು ಶಾಫಿ ಸಅದಿಯವರು ಅಭಿನಂದಿಸಿದ್ದಾರೆ.
https://www.facebook.com/share/p/19JR66xZYs/
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ