ಮಂಗಳೂರು: ಇತ್ತೀಚೆಗೆ ಕೋಮುವಾದಿ ದುಷ್ಕರ್ಮಿಗಳಿಂದ ಅಮಾಯಕ ಅಬ್ದುಲ್ ರಹೀಮ್ ಹತ್ಯೆ ಮತ್ತು ಖಲಂದರ್ ಶಾಫಿಯವರ ಮೇಲಿನ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಜಿಲ್ಲಾ ಸಮಿತಿ, ಅಮಾಯಕ ಮುಸ್ಲಿಂ ಯುವಕರನ್ನು ಗುರಿಯಾಗಿರಿಸಿ ನಡೆಯುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಜಿಲ್ಲೆಯಾದ್ಯಂತ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಬೇಕೆಂದು ಆಗ್ರಹಿಸಿ ದಕ್ಷಿಣ ಜಿಲ್ಲಾ ಪಶ್ಚಿಮ ವಲಯ ಪೋಲಿಸ್ ಉಪ ಮಹಾ ನಿರೀಕ್ಷಕರಾದ ಶ್ರೀ ಅಮಿತ್ ಸಿಂಗ್ ಐಪಿಎಸ್ ರವರಿಗೆ ಮನವಿ ಪತ್ರವನ್ನು ನೀಡಿದೆ.
ಹಂತಕರನ್ನೂ, ದ್ವೇಷ ಭಾಷಣ ಬಿಗಿದು ಹತ್ಯೆಗೆ ಪ್ರಚೋದನೆ ನೀಡಿದವರನ್ನೂ ಮತ್ತು ಹತ್ಯೆ ಯತ್ನ ಪ್ರಕರಣಗಳಲ್ಲಿ ಭಾಗಿಯಾದವರನ್ನು ಕೂಡಲೇ ಪತ್ತೆ ಹಚ್ಚಿ ಕಠಿಣ ಕಾನೂನಿನಡಿಯಲ್ಲಿ ಬಂಧಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ದ,ಕ ವೆಸ್ಟ್ ಜಿಲ್ಲಾಧ್ಯಕ್ಷ ಜನಾಬ್ ಮುಹಮ್ಮದ್ ಹನೀಫ್ ಹಾಜಿ ಬಜ್ಪೆ, ಪ್ರಧಾನ ಕಾರ್ಯದರ್ಶಿ ಖತರ್ ಅಬ್ದುರ್ರಹೀಮ್ ಸಅದಿ, ಕೋಶಾಧಿಕಾರಿ ಅಹ್ಮದ್ ಬಶೀರ್ ಹಾಜಿ, ಕೆಎಂಜೆ ರಾಜ್ಯ ನಾಯಕರಾದ ಹಮೀದ್ ಬಜ್ಪೆ, ಕೆಎಂಜೆ ಜಿಲ್ಲಾ ನಾಯಕರಾದ ಅಬ್ದುಲ್ ಖಾದರ್ ಹಾಜಿ ಮುಡಿಪು, ಎಸ್ ಎಸ್ ಎಫ್ ದ.ಕ ಜಿಲ್ಲಾ ವೆಸ್ಟ್ ಉಪಾಧ್ಯಕ್ಷರಾದ ಸಿನಾನ್ ಸಖಾಫಿ ಅಜಿಲಮೊಗರು, ಕಾರ್ಯದರ್ಶಿ ಅಜ್ಮಲ್ ಕಾವೂರು ರವರು ಹಾಜರಿದ್ದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ