ಕೊಣಾಜೆ: ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮಗು ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಸೊಸೆ ಅಶ್ವಿನಿ ಮತ್ತು ಇಬ್ಬರು ಮೊಮ್ಮಕ್ಕಳ ಪೈಕಿ ಒಂದು ಮಗು ಮೃತಪಟ್ಟಿದೆ.
ಈ ಬಗ್ಗೆ ರಕ್ಷಣಾ ತಂಡದ ಭಾಗವಾಗಿರುವ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯ ಡಾ.ವಿಕ್ರಂ ಶೆಟ್ಟಿ ಮಾಹಿತಿ ನೀಡಿದ್ದು, ಒಂದು ಮಗು ಮೃತಪಟ್ಟಿದೆ. ಅವಶೇಷಗಳಡಿ ಸಿಲುಕಿರುವ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮಕ್ಕಳ ತಾಯಿ ಅಶ್ವಿನಿ ಉಸಿರಾಡುತ್ತಿದ್ದು, ಕೈಗಳನ್ನು ಅಲ್ಲಾಡಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮೃತಪಟ್ಟಿರುವ ಮಗುವನ್ನು ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ತಾಯಿ ಮತ್ತು ಇನ್ನೊಂದು ಮಗುವಿನ ರಕ್ಷಣಾ ಕಾರ್ಯ ಮುಂದುವರಿದಿದೆ.
ಶುಕ್ರವಾರ ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಸಂಭವಿಸಿದ ಈ ದುರಂತದಲ್ಲಿ ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ(58) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಸಿದ ಮನೆಯೊಳಗೆ ಸಿಲುಕಿದ್ದ ಕಾಂತಪ್ಪ ಪೂಜಾರಿ ಹಾಗೂ ಅವರ ಪುತ್ರ ಸೀತಾರಾಮರನ್ನು ರಕ್ಷಿಸಲಾಗಿದೆ. ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೀತಾರಾಮರ ಪತ್ನಿ ಅಶ್ವಿನಿ ಹಾಗೂ 3 ಹಾಗೂ 2 ವರ್ಷದ ಇಬ್ಬರು ಮಕ್ಕಳು ಕುಸಿದ ಮಣ್ಣು ಮತ್ತು ಮನೆಯ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಈ ಪೈಕಿ ಒಂದು ಮಗು ಸಾವನ್ನಪ್ಪಿದ್ದರೆ, ತಾಯಿ ಹಾಗೂ ಇನ್ನೊಂದು ಮಗು ಜೀವನ್ಮರಣ ಹೋರಾಟ ನಡೆಸುತ್ತಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ವೈದ್ಯರ ತಂಡವು ಅವರಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್